Saturday, May 18, 2024
spot_imgspot_img
spot_imgspot_img

ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ; ಸ್ಥಳದಲ್ಲೇ ಮೃತ್ಯು..!

- Advertisement -G L Acharya panikkar
- Advertisement -

ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಹೊಡೆದು ಭೀಕರ ಅಪಘಾತವಾದ ಘಟನೆ ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಲಾರಿ ಡಿಕ್ಕಿ ಹೊಡೆತಕ್ಕೆ ವಿದ್ಯಾರ್ಥಿನಿ ರಾಷ್ಟ್ರೀಯ ಹೆದ್ದಾರಿಯಿಂದ ಸರ್ವೀಸ್ ರಸ್ತೆಗೆ ಹಾರಿ ಬಿದ್ದಿದ್ದಾಳೆ. ವಿಜಾಪುರ ಗೊಲ್ಲರಹಟ್ಟಿ ಗ್ರಾಮದ 19 ವರ್ಷದ ಸುಚಿತ್ರ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಚಿತ್ರದುರ್ಗ ತಾಲೂಕಿನ ವಿಜಾಪುರ ಗೊಲ್ಲರಹಟ್ಟಿ ಬಳಿ ಈ ದುರ್ಘಟನೆ ನಡೆದಿದೆ. ಗೊಲ್ಲರಹಟ್ಟಿ ಬಳಿ ಕಾಲೇಜಿಗೆ ಹೋಗಲು 3 ಜನ ವಿದ್ಯಾರ್ಥಿನಿಯರು ಬಸ್ಸಿಗಾಗಿ ಕಾಯುತ್ತಾ ನಿಂತಿದ್ದರು. ದಾವಣಗೆರೆಯಿಂದ ಬೆಂಗಳೂರಿಗೆ ಹೊರಟಿದ್ದ ಲಾರಿ ಭಯಾನಕವಾಗಿ ಡಿಕ್ಕಿ ಹೊಡೆದಿದೆ.

ಲಾರಿ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಭೀಕರ ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಭರಮಸಾಗರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!