Friday, March 21, 2025
spot_imgspot_img
spot_imgspot_img

ಶಿರಾಡಿ ಘಾಟ್‌ನಲ್ಲಿ ಕಾರು ಹಾಗೂ ಕಂಟೈನ‌ರ್ ಲಾರಿ ನಡುವೆ ಭೀಕರ ಅಪಘಾತ; ಪಾಣೆಮಂಗಳೂರು ಮೂಲದ ತಾಯಿ ಮಗ ಸ್ಥಳದಲ್ಲೇ ಮೃತ್ಯು!

- Advertisement -
- Advertisement -

ಶಿರಾಡಿ: ಇನ್ನೋವಾ ಕಾರು ಹಾಗೂ ಕಂಟೈನ‌ರ್ ಲಾರಿ ನಡುವೆ ಡಿಕ್ಕಿ ಸಂಭವಿಸಿ, ಅಪಘಾತದ ತೀವ್ರತೆಗೆ ತಾಯಿ ಮಗ ಸ್ಥಳದಲ್ಲೇ ಮೃತಪಟ್ಟು, ಉಳಿದವರು ಗಂಭೀರ ಗಾಯಗೊಂಡ ಘಟನೆ ಶಿರಾಡಿ ಘಾಟ್‌ನಲ್ಲಿ ನಡೆದಿದೆ.

ಮೃತಪಟ್ಟವರನ್ನು ಪಾಣೆಮಂಗಳೂರು ಬೊಂಡಾಲದ ಶಬ್ಬಿರ್ ಎಂಬವರ ಮಗ ಮೊಹಮ್ಮದ್ ಶಫೀಕ್ (20) ಹಾಗೂ ಅವರ ಪತ್ನಿ ಸಫಿಯಾ(50) ಎಂದು ಗುರುತಿಸಲಾಗಿದೆ.

ಬೆಂಗಳೂರಿನಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಕೆಂಪುಹೊಳೆ ಸಮೀಪಿಸುತ್ತಿದ್ದಂತೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಂಟೈನ‌ರ್ ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟಿರುತ್ತಾರೆ. ಘಟನೆಯಲ್ಲಿ ಕಾರಿನಲ್ಲಿದ್ದ ಇತರರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಗಾಯಾಳುಗಳನ್ನು ಮಂಗಳೂರಿನ ಯುನಿಟಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಮೃತಪಟ್ಟಿರುವ ಶಫೀಕ್ ಕಾರು ಚಲಾಯಿಸುತ್ತಿದ್ದರು. ಇವರು ಮಂಗಳೂರಿನ ಕೊಣಾಜೆಯ ಪಿ ಎ ಇಂಜಿನಿಯರಿಂಗ್ ಕಾಲೇಜಿನ ಡಿಪ್ಲೊಮಾ ವಿದ್ಯಾರ್ಥಿಯಾಗಿರುತ್ತಾರೆ.

- Advertisement -

Related news

error: Content is protected !!