Saturday, June 28, 2025
spot_imgspot_img
spot_imgspot_img

ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ: ನಾಲ್ವರು ಮೃತ್ಯು

- Advertisement -
- Advertisement -

ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ನಾಲ್ವರು ಸಾವಿಗೀಡಾದ ಘಟನೆ ಚಿತ್ರದುರ್ಗದ ಚಿಕ್ಕಬೆನ್ನೂರು ಬಳಿ ನಡೆದಿದೆ.

ಮೃತರನ್ನು ಬೆಂಗಳೂರಿನ ಥಣಿಸಂದ್ರ ಮೂಲದ ಪ್ರಜ್ವಲ್ ರೆಡ್ಡಿ (30), ಹರ್ಷಿತಾ (28), ನೋಹನ್ (2) ಹಾಗೂ ವಿಜಯರೆಡ್ಡಿ ಎಂದು ಗುರುತಿಸಲಾಗಿದೆ.

ಬೆಂಗಳೂರಿನಿಂದ ಗೋವಾಕ್ಕೆ ಫಾರ್ಚುನರ್ ಕಾರಿನಲ್ಲಿ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ. ಪರಿಣಾಮ ಮಗು ಹಾಗೂ ಮಹಿಳೆ ಸೇರಿದಂತೆ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮತ್ತೋರ್ವ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!