Sunday, April 28, 2024
spot_imgspot_img
spot_imgspot_img

ಲಾರಿ ಮತ್ತು ಕಾರು ನಡುವೆ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು

- Advertisement -G L Acharya panikkar
- Advertisement -

ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ತಿರುಮಲಪುರ ಗೇಟ್ ಬಳಿಯ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಜರುಗಿದೆ. ಕಾರಿನ ಅತಿಯಾದ ವೇಗ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಹೇಮಂತ್, ಶರತ್, ನವೀನ್ ಹಾಗೂ ಇನ್ನೋರ್ವ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ನೆಲಮಂಗಲ ಮೂಲದ ನಾಲ್ವರು ತಮ್ಮ ಕಾರಿನಲ್ಲಿ ಹಾಸನಕ್ಕೆ ತೆರಳುತ್ತಿದ್ದರು. ಈ ವೇಳೆ ಕಾರಿನ ಮುಂದೆ ಚಲಿಸುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ‌ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿ ಇದ್ದ ನಾಲ್ವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.

ಭಾನುವಾರ ಮುಂಜಾನೆ 5 ಗಂಟೆಯ ವೇಳೆಯಲ್ಲಿ ಈ ಅಪಘಾತ ಜರುಗಿದೆ. ಸ್ಥಳಕ್ಕೆ ನಾಗಮಂಗಲ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಸದ್ಯ ಮೃತದೇಹಗಳ ಮರಣೋತ್ತರ ಪರೀಕ್ಷೆ ಬೆಳ್ಳೂರು ಕ್ರಾಸ್‌ನ ಬಿಜಿಎಸ್ ಆಸ್ಪತ್ರೆಯಲ್ಲಿ ನಡೆಯುತ್ತಿದ್ದು, ಬಳಿಕ ಸಂಬಂಧಿಕರಿಗೆ ಮೃತದೇಹಗಳನ್ನು ಹಸ್ತಾಂತರ ಮಾಡಲಾಗುವುದು.

- Advertisement -

Related news

error: Content is protected !!