- Advertisement -
- Advertisement -
ಮನೆ ಬಳಿ ಆಟವಾಡುತ್ತಿರುವಾಗ ಆಯತಪ್ಪಿ ಬಾವಿಗೆ ಬಿದ್ದು ಮೂರು ವರ್ಷದ ಮಗು ಮೃತಪಟ್ಟ ಘಟನೆ ಕಾರವಾರ ನಗರದ ಹರಿದೇವದಲ್ಲಿ ನಡೆದಿದೆ. ಸೂರಜ್ ಮತ್ತು ವಿನುತ ದಂಪತಿಗಳ ಪುತ್ರಿ ಸ್ತುತಿ(3) ಮೃತಪಟ್ಟ ಬಾಲಕಿ.
ಈಕೆ ಮನೆಯ ಸಮೀಪ ಆಟವಾಡುತ್ತಿದ್ದ ವೇಳೆ ಮನೆಯ ಪಕ್ಕದಲ್ಲೇ ಇದ್ದ ಬಾವಿಗೆ ಮಣ್ಣನ್ನು ಹಾಕಲು ಮುಂದಾಗಿದ್ದಾಳೆ. ಈ ವೇಳೆ ಆಯತಪ್ಪಿ ಬಾವಿಗೆ ಬಿದ್ದು ಮೃತಪಟ್ಟಿದ್ದಾಳೆ ಎಂದು ಹೇಳಲಾಗಿದೆ.
ಮನೆಯಲ್ಲಿ ಆಟವಾಡುತ್ತಿದ್ದ ಮಗು ಕಾಣದಿದ್ದಾಗ ಪೋಷಕರು ಗಾಬರಿಗೊಂಡು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಎಲ್ಲಿಯೂ ಬಾಲಕಿ ಅವರಿಗೆ ಕಾಣಿಸಲಿಲ್ಲ. ಅನುಮಾನ ಬಂದು ಬಾವಿಯೊಳಗೆ ನೋಡಿದಾಗ, ಬಾಲಕಿ ಬಿದ್ದಿದ್ದು ಗೊತ್ತಾಗಿದೆ. ತಕ್ಷಣ ಮಗುವನ್ನು ಆಸ್ಪತ್ರೆಗೆ ಒಯ್ಯಲಾಯಿತು. ಆದರೆ ಅಷ್ಟರಲ್ಲೇ ಮಗು ಮೃತಪಟ್ಟಿತ್ತು. ಕಾರವಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
- Advertisement -