- Advertisement -
- Advertisement -
ಸಂಚಾರ ಅಸ್ತವ್ಯಸ್ಥ: ಮೆಸ್ಕಾಂ, ಅರಣ್ಯ ಇಲಾಖೆ ಮತ್ತು ಸ್ಥಳೀಯರ ಸಹಕಾರದಿಂದ ತೆರವು ಕಾರ್ಯಾಚರಣೆ



ಕರಾವಳಿಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಅಲ್ಲಲ್ಲಿ ರಸ್ತೆ ಮೇಲೆ ಮಣ್ಣು, ಮರ, ವಿದ್ಯುತ್ ಕಂಬಗಳು ಉರುಳಿ ಬಿದ್ದು ಅಪಾಯ ಸಂಭವಿಸುತ್ತಿರುವ ಬಗ್ಗೆ ವರದಿಯಾಗುತ್ತಿದೆ.

ವಿಟ್ಲ ಮಂಗಳೂರು ರಾಜ್ಯ ಹೆದ್ದಾರಿಯ ಪಾತ್ರ ತೋಟ ಎಂಬಲ್ಲಿ ರಸ್ತೆ ಮೇಲೆ ಬೃಹತ್ತಾಕಾರದ ಮರ ಬಿದ್ದು ಸಂಚಾರ ಅಸ್ತವ್ಯಸ್ಥಗೊಂಡಿದೆ. ಪರಿಣಾಮ ವಿದ್ಯುತ್ ತಂತಿಗಳಿಗೂ ಹಾನಿಯಾಗಿದ್ದು ಮೆಸ್ಕಾಂ, ಅರಣ್ಯ ಇಲಾಖೆ ಮತ್ತು ಸ್ಥಳೀಯರ ಸಹಕಾರದಿಂದ ತೆರವು ಕಾರ್ಯಾಚರಣೆ ನಡೆದಿದೆ. ರಸ್ತೆ ಸಂಚಾರ ತೆರವುಗೊಳಿಸಲಾಗಿದೆ.
- Advertisement -








