ಕಲ್ಲಿದ್ದಲು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಬುಡಕಟ್ಟು ಮಹಿಳೆಯೊಬ್ಬರ ಮೇಲೆ 11 ಮಂದಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಫಾಲ್ತಾನ್ನಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿ ಕಾರ್ಖಾನೆಯ ಮಾಲೀಕ ಮತ್ತು ಆರೋಪಿ ಶಂಕಿತ ಬಾಲು ಶೇಖ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇತರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಕಲ್ಲಿದ್ದಲು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ನನ್ನ ಮೇಲೆ ಹನ್ನೊಂದು ಮಂದಿ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ. ಈ ಕುರಿತು ಪೊಲೀಸ್ ವರಿಷ್ಠಾಧಿಕಾರಿ ಸಮೀರ್ ಶೇಖ್ ಮಾತನಾಡಿ, ಕಲ್ಲಿದ್ದಲು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ 11 ಜನರು ಆಕೆಯ ಪತಿಯನ್ನು ಕೊಠಡಿಯಲ್ಲಿ ಕೂಡಿಹಾಕಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆ ನಂತರ ಆರೋಪಿಗಳಿಂದ ತಪ್ಪಿಸಿಕೊಳ್ಳಲು ಗಂಡ ಮತ್ತು ಹೆಂಡತಿ ತಮ್ಮ ಐದು ವರ್ಷದ ಮಗಳೊಂದಿಗೆ ಪಂಢರಪುರ ಜಿಲ್ಲೆಯ ರಾಯಗಢದ ತಮ್ಮ ಗ್ರಾಮಕ್ಕೆ ತೆರಳಿ ಘಟನೆಯ ಕುರಿತು ತಮ್ಮ ಸಂಬಂಧಿಕರೊಬ್ಬರಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಿದ್ದಾರೆ.
ಮಹಿಳೆಯ ಮಾವ ಆಕೆಯನ್ನು ರಾಯಗಢ ಜಿಲ್ಲೆಯ ಮಾಂಡ್ವಿ ಪೊಲೀಸ್ ಠಾಣೆಗೆ ಕರೆದೊಯ್ದು ದೂರು ದಾಖಲಿಸಿದ್ದಾರೆ. ಸಂತ್ರಸ್ತೆಯ ದೂರನ್ನು ದಾಖಲಿಸಿಕೊಂಡಿರುವ ಮಾಂಡ್ವಿ ಪೊಲೀಸರು ಈ ಬಗ್ಗೆ ಸತಾರಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಬಳಿಕ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರ ಬಂಧನವಾಗಿದೆ.ಇತರರಿಗೆ ಹುಡುಕಾಟ ನಡೆಸಲಾಗುತ್ತಿದೆ.