- Advertisement -
- Advertisement -
ಟ್ರಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಪ್ರಧಾನಿ ಮೋದಿಯವರ ಚುನಾವಣಾ ರ್ಯಾಲಿಯ ಭದ್ರತೆಗೆ ನಿಯೋಜಿದ್ದ ಆರು ಜನ ಪೊಲೀಸರು ಮೃತಪಟ್ಟ ಘಟನೆ ರಾಜಸ್ಥಾನದ ಚುರು ಎಂಬಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 58ರಲ್ಲಿ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಆರು ಜನ ಪೊಲೀಸರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅಪಘಾತದ ತೀವ್ರತೆಗೆ ಕಾರು ನುಜ್ಜುಗುಜ್ಜಾಗಿದ್ದು, ಅಪಘಾತದಲ್ಲಿ ಮೃತರಾದ ಪೊಲೀಸರನ್ನು ಜುಂಜುನ್ನ ನರೇಂದ್ರ ಮೋದಿಯವರ ರ್ಯಾಲಿಯ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು.
ಅಪಘಾತದಲ್ಲಿ ಮೂವರು ಪೊಲೀಸರಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಅಪಘಾತದ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.
- Advertisement -