- Advertisement -
- Advertisement -
ಒಂದೇ ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಬೈಕ್ ನಿಂತಿದ್ದ ವೇಳೆ ರಭಸದಿಂದ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೂವರು ಮೃತಪಟ್ಟಿರುವ ಘಟನೆ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಮೃತಪಟ್ಟವರನ್ನು ಮಹಮ್ಮದ್ ಫಾರೂಕ್, ಅಬ್ರಾರ್ ಹಾಗೂ ಮಹಮ್ಮದ್ ಸಿದ್ದಿಕ್ ಎಂದು ಗುರುತಿಸಲಾಗಿದೆ.
ರಾತ್ರಿ ಸುಮಾರು 11 ಗಂಟೆಗೆ ಈ ಘಟನೆ ನಡೆದಿದ್ದು , ಟಾಟಾ ಏಸ್ ಚಾಲಕ ವಾಹನವನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಗುಜರಿ ಅಂಗಡಿಯಲ್ಲಿ ಕೆಲಸ ಮಾಡುತ್ತಾ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫಾರೂಕ್ ಹಾಗೂ ಅಬ್ರಾರ್ ರಂಜಾನ್ ಹಬ್ಬದ ಅಂಗವಾಗಿ ಹೊಸಬಟ್ಟೆ, ಚಪ್ಪಲಿ ಖರೀದಿಗಾಗಿ ತೆರಳುತ್ತಿದ್ದರು. ಈ ವೇಳೆ ದುರ್ಘಟನೆ ಸಂಭವಿಸಿದೆ. ರಾಜಗೋಪಾಲ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -