Tuesday, April 30, 2024
spot_imgspot_img
spot_imgspot_img

ಬಂಟ್ವಾಳ : ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ

- Advertisement -G L Acharya panikkar
- Advertisement -

ಬಂಟ್ವಾಳ : ಮಹಿಳೆಯೊಬ್ಬರು ತನ್ನ ಮಗಳು ಹಾಗೂ ಅಪ್ಪನ ಎದುರೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಫರಂಗಿಪೇಟೆಯಲ್ಲಿ ನಿನ್ನೆ ನಡೆದಿದೆ.

ಮೃತ ಮಹಿಳೆಯನ್ನು ಕುಮ್ಡೇಲು ನಿವಾಸಿ ಉಮೇಶ್ ಬೆಳ್ಚಡರ ಪತ್ನಿ ಯಶೋಧಾ(38) ಎಂದು ಗುರುತಿಸಲಾಗಿದೆ.

ಮೃತ ಯಶೋಧ ಅವರು ಮೂರ್ಛೆ ರೋಗದಿಂದ ಬಳಲುತ್ತಿದ್ದು, ಕೆಲವೊಂದು ಬಾರಿ ತೀವ್ರ ಕೋಪಕ್ಕೆ ಒಳಗಾಗಿ ಜಗಳ ಮಾಡುತ್ತಿದ್ದರು. ಹೀಗಾಗಿ ಯಶೋಧ ಅವರ ಗಂಡ 10 ವರ್ಷದ ಹಿಂದೆ ಬಿಟ್ಟು ಹೋಗಿದ್ದರು.

ಮಂಗಳವಾರ ಬೆಳಿಗ್ಗೆ ಎಂದಿನಂತೆ ಎದ್ದು, ಕೆ ಎಸ್ ಆರ್ ಟಿ ಸಿ ಬಿಜೈ ಬಸ್ ಸ್ಟಾಂಡ್ ಗೆ ಕೆಲಸಕ್ಕೆ ಹೋಗಿದ್ದರು, ಆದರೆ 9 ಗಂಟೆಗೆ ಮನೆಗೆ ಕರೆ ಮಾಡಿ “ನಾನು ಫರಂಗಿಪೇಟೆಯಲ್ಲಿದ್ದೇನೆ. ನನಗೆ ಬದುಕುವುದು ಇಷ್ಟವಿಲ್ಲ. ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ” ಎಂದು ಹೇಳಿ ಫೋನ್ ಕಟ್ ಮಾಡಿದ್ದಾರೆ.

ಕೂಡಲೇ ಪುತ್ರಿ ಹಾಗೂ ತಂದೆ ಬಾಲಕೃಷ್ಣ ಅವರ ಆಟೋದಲ್ಲಿ ಫರಂಗಿಪೇಟೆಗೆ ಬಂದಾಗ ಯಶೋಧಾ ಅವರು ನೇತ್ರಾವತಿ ನದಿ ಕಿನಾರೆಗೆ ವೇಗವಾಗಿ ನಡೆದುಕೊಂಡು ಹೋಗುತ್ತಿದ್ದು, ಓಡಿ ಹೋಗಿ ನದಿ ಕಿನಾರೆ ಬಳಿ ಹಿಡಿದುಕೊಂಡಾಗ ಪುತ್ರಿ ಹಾಗೂ ತಂದೆಯನ್ನು ದೂಡಿ ಏಕಾಏಕಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆಯ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

- Advertisement -

Related news

error: Content is protected !!