- Advertisement -
- Advertisement -
ಕರ್ತವ್ಯದಲ್ಲಿರುವಾಗಲೇ ಯುವ ವೈದ್ಯ ಕುಸಿದು ಬಿದ್ದು ಮೃತಪಟ್ಟ ಘಟನೆ ರಾಯಚೂರಿನಲ್ಲಿ ಜಿಲ್ಲೆಯ ಸಿಂಧನೂರು ನಗರದ ಅಕ್ಕಮಹಾದೇವಿ ಆಸ್ಪತ್ರೆಯಲ್ಲಿ ನಡೆದಿದೆ.
ಜನರಲ್ ಸರ್ಜನ್ ಡಾ. ಚಂದ್ರಶೇಖರ ಮಾದಿನೂರು (34ವ) ಸಾವನ್ನಪ್ಪಿರುವ ವೈದ್ಯ. ಎಂದಿನಂತೆ ರೋಗಿಗಳನ್ನು ಪರೀಕ್ಷೆ ಮಾಡಿ ಚಿಕಿತ್ಸೆ ನೀಡುತ್ತಿದ್ದರು. ಸ್ವಲ್ಪ ಒತ್ತಡ ಎನ್ನಿಸಿದ್ದರಿಂದ ವಿಶ್ರಾಂತಿ ಪಡೆಯಲು ಮನೆಗೆ ತೆರಳಲು ಮುಂದಾದಾಗ ಮೆಟ್ಟಿಲು ಹತ್ತುವಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಆಸ್ಪತ್ರೆ ಮೇಲ್ಮಹಡಿಯಲ್ಲೇ ಮನೆಯಿದ್ದಿದುದರಿಂದ ಮೆಟ್ಟಿಲು ಹತ್ತಿ ಹೋಗುವಾಗ ಎದೆನೋವು ಕಾಣಿಸಿಕೊಂಡಿದೆ. ಕೆಲವೇ ಕ್ಷಣದಲ್ಲಿ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
- Advertisement -