Saturday, June 28, 2025
spot_imgspot_img
spot_imgspot_img

ಮಣಿಪಾಲ: ಚಲಿಸುವ ರೈಲಿಗೆ ಸಿಲುಕಿ ಯುವಕ ಆತ್ಮಹತ್ಯೆ

- Advertisement -
- Advertisement -

ಮಣಿಪಾಲ: ಚಲಿಸುವ ರೈಲಿಗೆ ಬೇಕಂತಲೇ ಸಿಲುಕಿ ಯುವಕನೊರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗಿನ ಜಾವ ( ಉಡುಪಿ) ಇಂದ್ರಾಳಿ ರೈಲ್ವೇ ನಿಲ್ದಾಣದ ಸಮೀಪ ನಡೆದಿದೆ.

ಮೃತರನ್ನು ದೀಕ್ಷಿತ್ (32 ) ಎಂದು ಗುರುತಿಸಲಾಗಿದೆ..

ಇಂದ್ರಾಳಿ ರೈಲ್ವೇ ನಿಲ್ದಾಣದ ಸಮೀಪ ರೈಲ್ವೇ ಹಳಿಯಲ್ಲಿ ಚಲಿಸುವ ರೈಲು ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದವರನ್ನು ತಕ್ಷಣ ರೈಲ್ವೇ ಪೊಲೀಸರು ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆ ತಂದಾಗ ಪರೀಕ್ಷಿಸಿದ ವೈದ್ಯರು ದೀಕ್ಷಿತ್‌ ಮೃತ ಪಟ್ಟಿರುವುದಾಗಿ ತಿಳಿಸಿರುತ್ತಾರೆ.

ಮೃತ ದೀಕ್ಷಿತ್‌ ಯಾವುದೋ ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ರೈಲ್ವೇ ಹಳಿಯಲ್ಲಿ ಚಲಿಸುವ ರೈಲಿಗೆ ಡಿಕ್ಕಿ ಹೊಡೆದಿದ್ದಾರೆಂದು ತಿಳಿದು ಬಂದಿದೆ.

ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆ ಯುಡಿಆರ್ ಕ್ರಮಾಂಕ 15/2024 ಕಲಂ: 174 ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

- Advertisement -

Related news

error: Content is protected !!