Monday, May 6, 2024
spot_imgspot_img
spot_imgspot_img

ಎಂಗೇಜ್ಮೆಂಟ್ ರಿಂಗ್ ಕಳೆದು ಹೋಗಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಯುವಕ

- Advertisement -G L Acharya panikkar
- Advertisement -

ಎಂಗೇಜ್ಮೆಂಟ್ ವೇಳೆ ಹುಡುಗಿ ಹಾಕಿದ್ದ ಉಂಗುರ ಕಳೆದು ಹೋಗಿದ್ದಕ್ಕೆ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ತುಮಕೂರು ನಗರದ ದೇವರಾಯಪಟ್ಟಣದಲ್ಲಿ ನಡೆದಿದೆ.

ಕಮಲೇಶ್ (36) ಮೃತ ಯುವಕ. ಕಮಲೇಶ್ ಗೆ ಕಳೆದ ಮೂರು ತಿಂಗಳ ಹಿಂದೆ ವಿವಾಹ ನಿಶ್ಚಯವಾಗಿತ್ತು. ಬೆಂಗಳೂರು ಮೂಲದ ಯುವತಿಯೊಂದಿಗೆ ವಿವಾಹ ನಿಶ್ಚಿಯವಾಗಿತ್ತು. ಸ್ನಾನ ಮಾಡುವ ಸಂದರ್ಭದಲ್ಲಿ ಉಂಗುರ ಕಳೆದು ಹೋಗಿದೆ. ಈ ವಿಚಾರ ಮನೆಯವರಿಗೆ ಹೇಳಲು ಹೆದರಿ, ವಿಷ ಸೇವನೆ ಮಾಡಿದ್ದಾನೆ.

ನ. 17ರಂದು ವಿಷ ಸೇವನೆ ಮಾಡಿದ್ದು, ಆತನನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಈಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಕ್ಯಾತಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

- Advertisement -

Related news

error: Content is protected !!