Saturday, June 28, 2025
spot_imgspot_img
spot_imgspot_img

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿದ ಯುವಕ; ಮುಳುಗು ತಜ್ಞರಿಂದ ಶೋಧ ಕಾರ್ಯಾಚರಣೆ

- Advertisement -
- Advertisement -
vtv vitla

ಬಂಟ್ವಾಳ: ನೇತ್ರಾವತಿ ನದಿಗೆ ವ್ಯಕ್ತಿಯೋರ್ವ ಹಾರಿದ ಘಟನೆ ವರದಿಯಾಗಿದ್ದು, ಪೊಲೀಸರು, ಸ್ಥಳೀಯ ಮುಳುಗು ತಜ್ಞರು, ಯುವಕರು ಮತ್ತು ಅಗ್ನಿಶಾಮಕ ದಳದವರು ಹುಡುಕಾಟ ನಡೆಸುತ್ತಿದ್ದಾರೆ.

ನೆಟ್ಲ ನಿವಾಸಿ ವಿವಾಹಿತ ಪ್ರವೀಣ್ ನೆಟ್ಲ ನೇತ್ರಾವತಿ ನದಿಗೆ ಹಾರಿದ ವ್ಯಕ್ತಿ ಎಂದು ಹೇಳಲಾಗುತ್ತಿದೆ.

ಮೆಕಾನಿಕ್ ಕೆಲಸ ಮಾಡುತ್ತಿದ್ದ ಈತ ಮಾನಸಿಕವಾಗಿ ನೊಂದಿದ್ದ ಎನ್ನಲಾಗಿದೆ. ಕಳೆದ ಎರಡು ದಿನಗಳಿಂದ ಕೆಲಸಕ್ಕೆ ಹೋಗದ ತಿರುಗಾಡುತ್ತಿದ್ದ ಎನ್ನಲಾಗಿದ್ದು, ನದಿಗೆ ಹಾರುವ ಕೆಲ ಗಂಟೆಗಳ ಮೊದಲು ವ್ಯಾಟ್ಸ್ ಆಪ್ ಗ್ರೂಪ್ ನಲ್ಲಿ ಸಾಯುತ್ತೇನೆಂದು ಮೆಸೇಜ್ ಕೂಡ ಮಾಡಿದ್ದಾನೆ ಎಂದು ಹೇಳಲಾಗಿದೆ.

ಬೈಕಿನಲ್ಲಿ ಬಂದ ಈತ ನೇತ್ರಾವತಿ ಹೊಸ ಸೇತುವೆ ಮೇಲೆ ಬೈಕ್ ನಿಲ್ಲಿಸಿ ಚಪ್ಪಲಿ ಇಟ್ಟು ಹಾರಿದ್ದಾನೆ ಎಂದು ಪ್ರತ್ಯಕ್ಷದರ್ಶಿಯೋರ್ವರು ತಿಳಿಸಿದ್ದಾರೆ.

ಇದೀಗ ಈತನಿಗಾಗಿ ಮುಳುಗುತಜ್ಞರು, ಪೊಲೀಸ್ ಒಟ್ಟಿಗೆ ಸ್ಥಳೀಯ ಯುವಕರು ಮತ್ತು ಅಗ್ನಿಶಾಮಕ ದಳದವರು ನೀರಿನಲ್ಲಿ ಹುಡುಕುತ್ತಿದ್ದು, ಬಂಟ್ವಾಳ ‌ನಗರ ಠಾಣಾ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

- Advertisement -

Related news

error: Content is protected !!