Friday, June 27, 2025
spot_imgspot_img
spot_imgspot_img

ಜಲಮಂಡಳಿ ತೋಡಿದ ಗುಂಡಿಗೆ ಬಿದ್ದು ಯುವಕ ಸಾವು, ಇಬ್ಬರು ಗಂಭೀರ..!

- Advertisement -
- Advertisement -

ಜಲಮಂಡಳಿ ತೋಡಿದ ಗುಂಡಿಗೆ ಬಿದ್ದು ಓರ್ವ ಯುವಕ ಸಾವನ್ನಪ್ಪಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು ಕೆಂಗೇರಿ ಬಳಿಯ ಕೊಮ್ಮಘಟ್ಟ ಸರ್ಕಲ್‌ನಲ್ಲಿ ನಡೆದಿದೆ.

ಮೃತಪಟ್ಟ ಯುವಕ ಸದ್ದಾಂ ಪಾಷಾ(20) ಹಾಗೂ ಗಂಭೀರ ಗಾಐಗೊಂಡವರನ್ನು ಉಮ್ರಾನ್ ಪಾಷಾ ಮತ್ತು ಮುಬಾರಕ್‌ ಪಾಷಾ ಎಂದು ಗುರುತಿಸಲಾಗಿದೆ.

ಜೆಜೆ ನಗರ ಮೂಲದ ಇವರು ಒಂದೇ ಸ್ಕೂಟರಿನಲ್ಲಿ ಸಂಚರಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಜಲ ಮಂಡಳಿಯವರು ಪೈಪ್ ಹಾಕಲು ಹಳ್ಳ ತೆಗೆದು ಬ್ಯಾರಿಕೇಡ್ ಹಾಕಿದ್ದರು. ಕೊಮ್ಮಘಟ್ಟ ಸರ್ಕಲ್‌ ಬಳಿ ಬರುವಾಗ ಬ್ಯಾರಿಕೇಡ್‌ ನಡುವಿನ ಸಣ್ಣ ಜಾಗದಲ್ಲಿ ವೇಗವಾಗಿ ದ್ವಿಚಕ್ರ ಚಲಾಯಿಸಿದ ಪರಿಣಾಮ ಸವಾರ ಸದ್ದಾಂ ಪಾಷಾ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾನೆ. ಕೂಡಲೇ ನೆರವಿಗೆ ದಾಖಲಿಸಿದ ಸ್ಥಳೀಯರು ಗಾಯಾಳುಗಳನ್ನು ಗುಂಡಿಯಿಂದ ಮೆಲಕ್ಕೆ ಎತ್ತು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು.

- Advertisement -

Related news

error: Content is protected !!