Sunday, May 5, 2024
spot_imgspot_img
spot_imgspot_img

ಕಾರು ಹರಿದು ಯುವಕ ಮೃತ್ಯು..!

- Advertisement -G L Acharya panikkar
- Advertisement -

ಮೂತ್ರ ವಿಸರ್ಜನೆ ಮಾಡುತ್ತಿದ್ದ ಯುವಕನ ಮೇಲೆ ಕಾರು ಹರಿದ ಹಿನ್ನೆಲೆ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸಕಲೇಶಪುರ ಹೊಸ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ.

ಮೃತಪಟ್ಟ ಯುವಕ ಕೆಸಗನಹಳ್ಳಿ ಲೋಕೇಶ್ (22) ಎಂದು ಗುರುತಿಸಲಾಗಿದೆ.

ರಸ್ತೆ ಬದಿಯಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ಯುವಕನ ಮೇಲೆ ಕಾರು ಏಕಾಏಕಿ ಗುದ್ದಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಸಕಲೇಶಪುರ ಪುರಸಭೆಯ ಮಾಜಿ ಅಧ್ಯಕ್ಷ ಸಂತೋಷ್ ಜೈನ್ ಪುತ್ರ ಕಾರು ಚಲಾಯಿಸಿದ ಎಂದು ತಿಳಿದುಬಂದಿದ್ದು. ಯುವಕನಿಗೆ ಡಿಕ್ಕಿ ಮಾಡುವ ಮೊದಲೇ ಕ್ಯಾಂಟರ್ ಗೆ ಅಪಘಾತ ಮಾಡಿಕೊಂಡು ಬಂದಿದ್ದ ಎಂದು ತಿಳಿದು ಬಂದಿದೆ. ಕಾರು ಚಾಲಕ ಅಪಘಾತ ನಡೆಸಿ ಸ್ಥಳದಿಂದ ಪರಾರಿಯಾಗಿದ್ದ ಎಂದು ತಿಳಿದು ಬಂದಿದೆ.

ಕಾರು ಚಲಾಯಿಸುವಾಗ ಮಾದಕ ವಸ್ತು ಸೇವಿಸಿದ ಎಂದು ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ನಗರ ಠಾಣೆಯ ಪೊಲೀಸರು ಅಪಘಾತ ನಡೆಸಿದ ಕಾರನ್ನು ವಶಕ್ಕೆ ಪಡೆದು ಆರೋಪಿಗಾಗಿ ಶೋಧ ನಡೆಸಿದ್ದಾರೆ. ಈ ಘಟನೆಯ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!