Thursday, May 2, 2024
spot_imgspot_img
spot_imgspot_img

ಹೋರಿ ಬೆದರಿಸುವ ಸ್ಪರ್ಧೆಯನ್ನು ನೋಡಲು ಹೋದ ಯುವಕ ಸಾವು…!

- Advertisement -G L Acharya panikkar
- Advertisement -

ಹೋರಿ ಬೆದರಿಸುವ ರಣರೋಚಕ ಸ್ಪರ್ಧೆಯನ್ನು ನೋಡಲು ಹೋಗಿದ್ದ ಯುವಕ ಹೋರಿಯ ತಿವಿತಕ್ಕೆ ಒಳಗಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಶಿಕಾರಿಪುರದಲ್ಲಿ ನಡೆದಿದೆ.

ಶಿಕಾರಿಪುರ, ಈಸೂರು ಗ್ರಾಮದ ಪರಶುರಾಮ್(27) ಮೃತ ಯುವಕ ಎಂದು ಗುರುತಿಸಲಾಗಿದೆ.

ಶಿಕಾರಿಪುರ ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ರಾಜ್ಯ ಮಟ್ಟದ ಹೋರಿ ಬೆದರಿಸುವ ಸ್ಪರ್ಧೆಯು ಜ. 21 ರಂದು ನಡೆದಿದ್ದು, ಈ ಸ್ಪರ್ಧೆ ವೀಕ್ಷಣೆಗೆ ಬಂದಿದ್ದ ಯುವಕ ಬಹಳ ಹತ್ತಿರದಿಂದ ಸ್ಪರ್ಧೆಯನ್ನು ವೀಕ್ಷಿಸುತ್ತಿದ್ದ ಈ ಸಂದರ್ಭ ಹೋರಿ ಕುತ್ತಿಗೆಗೆ ತಿವಿದು ಗಂಭೀರವಾಗಿ ಗಾಯಗೊಂಡಿದ್ದರು.

ಕೂಡಲೇ ಅವರನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ಸ್ನೇಹಿತರು ಕರೆದೊಯ್ದಿದ್ದರು. ಆದರೆ ಆಸ್ಪತ್ರೆಗೆ ಸಾಗಿಸುವ ಹಾಗಿಯಲ್ಲೇ ಯುವಕ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ. ಈ ಬಗ್ಗೆ ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!