Monday, May 6, 2024
spot_imgspot_img
spot_imgspot_img

ಮಂಗಳೂರು : ತೆಂಗಿನಕಾಯಿ ತೆಗೆಯಲು ನದಿ ನೀರಿಗಿಳಿದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು

- Advertisement -G L Acharya panikkar
- Advertisement -

ಮಂಗಳೂರು : ತೆಂಗಿನಕಾಯಿ ತೆಗೆಯಲು ನದಿ ನೀರಿಗಿಳಿದ ಯುವಕನೋರ್ವ ಮುಳುಗಿ ಮೃತಪಟ್ಟ ಘಟನೆ ಕಟೀಲು ಎಂಬಲ್ಲಿ ನಡೆದಿದೆ.

ಮೃತ ಯುವಕನನ್ನು ಕಟೀಲು ಮೂಲದ ಅಶೋಕ್ (35) ಎಂದು ಗುರುತಿಸಲಾಗಿದೆ.

ಅಶೋಕ್ ತೆಂಗಿನಕಾಯಿ ತೆಗೆಯಲು ನದಿ ನೀರಿಗೆ ಇಳಿದಿದ್ದು, ಈ ಸಂದರ್ಭ ಆಯತಪ್ಪಿ ನೀರಿಗೆ ಬಿದ್ದು ಮುಳುಗಿದ್ದಾರೆ. ಜೊತೆಯಲ್ಲಿದ್ದ ಇನ್ನೊಬ್ಬ ಯುವಕ ನೀಡಿದ ಮಾಹಿತಿಯಂತೆ ಸ್ಥಳಕ್ಕಾಗಮಿಸಿದ ಗೂಡಿನಬಳಿ ನಿವಾಸಿ, ಇಲ್ಲಿನ ಈಜುಪಟು ಜೀವರಕ್ಷಕ ತಂಡದವರು ಮೃತದೇಹವನ್ನು ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಬಜ್ಪೆ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಬಜ್ಪೆಸರಕಾರಿ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಕರಿಗೆ ಮೃತದೇಹ ಹಸ್ತಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!