ಮುಸ್ಲಿಂ ಹುಡುಗಿಯನ್ನು ಪ್ರೀತಿಸಿದ್ದಕ್ಕೆ ಯುವಕನನ್ನು ಹತ್ಯೆಗೈದು ಮೃತದೇಹವನ್ನು 7 ತುಂಡುಗಳಾಗಿ ಕತ್ತರಿಸಿದ ಭೀಕರ ಘಟನೆ ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ನಡೆದಿದೆ.
21 ವರ್ಷದ ಮನೋಹರ್ಲಾಲ್ ಮುಸ್ಲಿಂ ಹುಡುಗಿಯನ್ನು ಪ್ರೀತಿಸುತ್ತಿದ್ದ. ಈ ವಿಚಾರಕ್ಕೆ ಸಿಟ್ಟಾದ ಯುವತಿಯ ಮನೆಯ ಮೂವರು ಮನೋಹರ್ನನ್ನು ಥಳಿಸಿ, ಬಳಿಕ ಕಲ್ಲುಗಳಿಂದ ಜಜ್ಜಿ ಕೊಲೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಶಬೀರ್, ಮುಸಾಫಿರ್ ಹುಸೇನ್ ಮತ್ತೊಬ್ಬಳು ಆತನ ಪತ್ನಿ ಎಂದು ಗುರುತಿಸಲಾಗಿದೆ.
ಯುವಕ ಮನೋಹರ್ ಜೂನ್ 6 ರಿಂದ ನಾಪತ್ತೆಯಾಗಿದ್ದ. ಇದು ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದ ವಿಚಾರ ಎಂದು ಹೇಳಲಾಗುತ್ತಿದೆ. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಆದರೆ ಯುವತಿಯ ಕುಟುಂಬದವರಿಗೆ ಇದು ಇಷ್ಟವಿರಲಿಲ್ಲ. ಯುವಕನನ್ನು ಕೊಂದ ನಂತರ ಬಾಲಕಿಯ ಸಹೋದರ ಆತನ ದೇಹವನ್ನು 8 ತುಂಡುಗಳಾಗಿ ಕತ್ತರಿಸಿ ಈ ತುಂಡುಗಳನ್ನು ಗೋಣಿಚೀಲದಲ್ಲಿ ತುಂಬಿದ್ದ ಎಂದು ಹೇಳಲಾಗಿದೆ.
ಬಳಿಕ ಆರೋಪಿಗಳು ಗೋಣಿಚೀಲವನ್ನು ಚರಂಡಿಯ ಕಲ್ಲುಗಳ ಕೆಳಗೆ ಹೂತಿಟ್ಟಿದ್ದ, ಜೂನ್ 9 ರಂದು ಕೆಲವರು ಈ ಮಾರ್ಗವಾಗಿ ಹೋಗುತ್ತಿದ್ದಾಗ ದುರ್ವಾಸನೆ ಬೀರಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ತನಿಖೆಯಲ್ಲಿ ಗೋಣಿಚೀಲದಿಂದ ಮನೋಹರ್ನ ದೇಹದ ಭಾಗಗಳು ಪತ್ತೆಯಾಗಿವೆ. ಮನೋಹರ್ ಅವರ ದೇಹವನ್ನು ಕೊಡಲಿಯಿಂದ ಕತ್ತರಿಸಲಾಗಿದೆ ಎಂದು ಹೇಳಲಾಗುತ್ತಿದೆ. ಅವರ ದೇಹದ ಕೆಲವು ಭಾಗಗಳೂ ಕಾಣೆಯಾಗಿವೆ.
ಮರಣೋತ್ತರ ಪರೀಕ್ಷೆಯಲ್ಲಿ ಬರ್ಬರ ಹತ್ಯೆ ನಡೆದಿರುವ ವಿಚಾರ ಬೆಳಕಿಗೆ ಬಂದಿದೆ. ಘಟನೆ ಸಂಬಂಧಿಸಿದಂತೆ ಬಾಲಕಿ ಸಹೋದರ ಶಬೀರ್ ಸೇರಿದಂತೆ 3 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.ಈಗ ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ. ಹುಡುಗಿಯನ್ನು ವಶಕ್ಕೆ ಪಡೆಯಲಾಗಿದ್ದು ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.