- Advertisement -
- Advertisement -
ಯುವಕನೋರ್ವನ ಬರ್ಬರ ಹತ್ಯೆ ಮಾಡಿದ ಘಟನೆ ಮಂಡ್ಯ ನಗರದ ಸ್ವರ್ಣಸಂದ್ರ ಬಡಾವಣೆಯಲ್ಲಿ ನಡೆದಿದೆ.
ಕೊಲೆಯಾದ ಯುವಕನನ್ನು ಅಕ್ಷಯ್( 24) ಎಂದು ಗುರುತಿಸಲಾಗಿದೆ.
ಹಳೆ ದ್ವೇಷದ ಹಿನ್ನೆಲೆ ಅಕ್ಷಯ್ನನ್ನು ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಫೋನ್ ಮಾಡಿ ಕರೆಸಿಕೊಂಡು ನಡು ಬೀದಿಯಲ್ಲಿ ಅಕ್ಷಯ್ನನನ್ನು ಕೊಚ್ಚಿ ಕೊಲೆ ಮಾಡಿದ್ದಾರೆ. ಹಳೆ ಸೇಡಿಗೆ ಆತನನ್ನು ಕೊಂದಿದ್ದಾರೆ ಎನ್ನಲಾಗುತ್ತಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಡ್ಯ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
- Advertisement -