Sunday, May 12, 2024
spot_imgspot_img
spot_imgspot_img

ಮಾರಕಾಸ್ತ್ರಗಳಿಂದ ಯುವಕನನ್ನು ಕೊಚ್ಚಿ ಬರ್ಬರ ಕೊಲೆ

- Advertisement -G L Acharya panikkar
- Advertisement -
This image has an empty alt attribute; its file name is Lakshmi-Ganesh-2-1024x683.jpg

ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕು ಗಡಿ ತಮಿಳುನಾಡಿನ ಬೇರಿಕೈ ಬಳಿ ನಡೆದಿದೆ.

ಬೆರಿಕೈ ಮೂಲದ ಕಾರ್ತಿಕ್ (32 ) ಕೊಲೆಯಾದ ಯುವಕ. ಮಾಲೂರು ರೌಡಿಶೀಟರ್ ಪ್ರತಾಪ್ ಎಂಬಾತ ಈ ಕೃತ್ಯ ವೆಸಗಿದ್ದಾನೆ.

ರೌಡಿ ಶೀಟರ್ ಪ್ರತಾಪ್ ಮಾಲೂರು ತಾಲೂಕಿನ ಮಾಸ್ತಿ ಹೋಬಳಿಯ ಅನಕರಳ್ಳಿ ಗ್ರಾಮದವನು. ಕೊಲೆ ಮಾಡಿ ಜೈಲು ಸೇರಿದ್ದನು. ಇತ್ತೀಚೆಗೆ ಬಿಡುಗಡೆಯಾಗಿ ಬಂದ ಪ್ರತಾಪ್ ಇದೀಗ ಮತ್ತೊಂದು ಕೊಲೆ ಮಾಡಿದ್ದಾನೆ.

ಲೋಕಸಭಾ ಚುನಾವಣೆ ಸಂಬಂಧ ನಿನ್ನೆ ಮಾಲೂರು ಪೋಲಿಸ್ ಠಾಣೆಯಲ್ಲಿ ರೌಡಿ ಪೆರೇಡ್ ನಡೆದಿತ್ತು. ಪೋಲಿಸ್ ಹಿರಿಯ ಅಧಿಕಾರಿಗಳು ಶಾಂತಿಯುತ ಚುನಾವಣೆ ನಡೆಸಲು ತಾಲೂಕಿನ ರೌಡಿಶೀಟರ್​ಗಳ ಪೆರೇಡ್ ಮಾಡಲಾಗಿತ್ತು. ಪೆರೇಡ್ ಗೆ ಗೈರು ಹಾಜರಾಗಿದ್ದ ದಿನವೇ ತಮಿಳುನಾಡು ಬೇರಿಕೈ ಬಳಿ ಕಾರ್ತಿಕ್ ಎಂಬ ಯುವಕನನ್ನು ಪ್ರತಾಪ್ ಕೊಲೆ ಮಾಡಿದ್ದಾನೆ. ಹೊಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!