- Advertisement -
- Advertisement -
ಯುವಕನೊಬ್ಬನ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಮಾಗಡಿ ಮುಖ್ಯರಸ್ತೆಯ ಕಡಬಗೆರೆ ಕ್ರಾಸ್ ಬಸ್ ನಿಲ್ದಾಣ ಬಳಿ ನಡೆದಿದೆ.
ಮೃತಪಟ್ಟ ಯುವಕ ಭಾರತ ಮೂಲದವನೆಂದು ಗುರುತಿಸಲಾಗಿದೆ.
ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ. ಮಲಗಿದ್ದರಲ್ಲೆ ಯುವಕ ಮೃತಪಟ್ಟಿದ್ದಾನೆ. ಯುವಕನ ಶವ ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಬಂದ ಮಾದನಾಯಕನಹಳ್ಳಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಮೃತನ ಗುರುತು ಪತ್ತೆಯಾಗಿಲ್ಲ. ಕುಡಿದ ಅಮಲಿನಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮಾದನಾಯಕನಹಳ್ಳಿ ಪೊಲೀಸರು ತನಿಖೆ ನದೆಸುತ್ತಿದ್ದಾರೆ.
- Advertisement -