Saturday, May 11, 2024
spot_imgspot_img
spot_imgspot_img

ಶಿವರಾತ್ರಿ ಆಚರಣೆಯ ಡ್ಯಾನ್ಸ್ ನಲ್ಲಿ ಮೈ ಟಚ್ ತಾಗಿದ್ದಕ್ಕೆ ಯುವಕನ ಕೊಲೆ!

- Advertisement -G L Acharya panikkar
- Advertisement -

ಶಿವರಾತ್ರಿ ಆಚರಣೆಯ ವೇಳೆ ಡ್ಯಾನ್ಸ್ ಮಾಡುವಾಗ ದೇಹ ತಾಗಿತು ಎಂಬ ಸಣ್ಣ ಕಾರಣಕ್ಕೆ ಯುವಕನೊಬ್ಬನನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಗಿರಿನಗರದ ದೇವಸ್ಥಾನದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಯೋಗೇಶ್ (23) ಕೊಲೆಯಾದ ಯುವಕನಾಗಿದ್ದಾನೆ.

ಬೈಕ್ ಸರ್ವೀಸ್ ಸೆಂಟರ್​ನಲ್ಲಿ ಯೋಗೇಶ್ ವಾಷಿಂಗ್ ಕೆಲಸ ಮಾಡುತ್ತಿದ್ದ. ನಿನ್ನೆ ಗಿರಿನಗರದ ದೇವಸ್ಥಾನದ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡುವಾಗ ದೇಹ ತಾಗಿತೆಂಬ ವಿಚಾರವಾಗಿ ಗಲಾಟೆ ನಡೆದಿದೆ. ಬಳಿಕ ಡ್ಯಾನ್ಸ್ ಮುಗಿಸಿ ಶ್ರೀನಗರದ ತನ್ನ ಮನೆಗೆ ಬೈಕ್​ ಮೂಲಕ ಯೋಗೇಶ್ ಹೋಗುವಾಗ ನಾಲ್ವರು ಯುವಕರು ಹಿಂಬಾಲಿಸಿದ್ದಾರೆ.

ದಾಳಿ ನಡೆಸಿದ ನಾಲ್ವರು, ಚಾಕುವಿನಿಂದ ಯೋಗೀಶ್​ಗೆ ಚುಚ್ಚಿದ್ದಾರೆ. ಹಂತಕರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಯೋಗೇಶ್ ಮನೆಯೊಂದರ ಕಾಂಪೌಂಡ್ ಹಾರಿದ್ದ. ಅಗ ಕಾಂಪೌಂಡ್​ಗೆ ಹಾಕಿದ್ದ ಗ್ಲಾಸ್ ಚುಚ್ಚಿರಬಹುದು ಎಂದು ಕೆಲವರು ಭಾವಿಸಿದ್ದರು. ಆದರೆ ಪೊಲೀಸರು ತನಿಖೆ ಮಾಡಿದಾಗ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ.

ಪ್ರಕರಣ ದಾಖಲಿಸಿಕೊಂಡ ಬ್ಯಾಟರಾಯನಪುರ ಠಾಣಾ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಬಂಧಿತರನ್ನು ತನಿಖೆ ನಡೆಸಲಾಗುತ್ತಿದೆ

- Advertisement -

Related news

error: Content is protected !!