Monday, April 29, 2024
spot_imgspot_img
spot_imgspot_img

ವಿಟ್ಲ: ವಿದೇಶದಿಂದ ಬಂದಿದ್ದ ಯುವಕ ಅನಾರೋಗ್ಯದಿಂದ ಮೃತ್ಯು

- Advertisement -G L Acharya panikkar
- Advertisement -

ವಿಟ್ಲ: ಮೂರು ದಿನಗಳ ಹಿಂದೆ ವಿದೇಶದಿಂದ ಬಂದಿದ್ದ ಯುವಕನೋರ್ವ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

ಕೇಪು ಗ್ರಾಮದ ಅಡ್ಯನಡ್ಕ ಮರಕ್ಕಿನಿ ನಿವಾಸಿ ಅಬ್ದುಲ್ ರಹಿಮಾನ್ ಅವರ ಪುತ್ರ ಅಶ್ರಫ್(38) ಮೃತಪಟ್ಟವರು.

ಕಳೆದ ಹಲವಾರು ವರ್ಷಗಳಿಂದ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಅನಾರೋಗ್ಯದಿಂದ ಮೂರು ದಿನ ಸ್ವದೇಶಕ್ಕೆ ಬಂದಿದ್ದರು. ಕೇರಳದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಬಳಿಕ ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು,. ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಪುತ್ರ, ಪುತ್ರಿ, ತಂದೆ, ತಾಯಿಯನ್ನು ಅಗಲಿದ್ದಾರೆ.

- Advertisement -

Related news

error: Content is protected !!