- Advertisement -
- Advertisement -
ಚಾರಣಕ್ಕೆ ತೆರಳಿದ್ದ ಯುವಕನೋರ್ವ ಹೃದಯಾಘಾತದಿಂದ ನಿಧನ ಹೊಂದಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಜತಿನ್ ಕುಮಾರ್ (25) ಎಂದು ಗುರುತಿಸಲಾಗಿದೆ.
ಈತ ಹರಿಯಾಣ ಮೂಲದ ನಿವಾಸಿಯಾಗಿದ್ದಾನೆ. ಕೊಡಗು ಜಿಲ್ಲೆಯ ಮಡಿಕೇರಿ ತಾ. ತಡಿಯಂಡಮೋಳು ಬೆಟ್ಟ ವೀಕ್ಷಣೆ ವೇಳೆ ಈ ಅವಘಡ ಸಂಭವಿಸಿದೆ. ಬೆಂಗಳೂರಿನ ಖಾಸಗಿ ಕಂಪನಿ ಒಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜತಿನ್ ಕುಮಾರ್, ತನ್ನ ಸ್ನೇಹಿತರೊಂದಿಗೆ ಮಡಿಕೇರಿಗೆ ಆಗಮಿಸಿದ್ದನು. ಅಂತೆಯೇ ಭಾನುವಾರ ಬೆಟ್ಟದ ಮೇಲೆ ತಲುಪಿದಾಗ ಎದೆನೋವು ಕಾಣಿಸಿಕೊಂಡಿದೆ. ಕೆಲಹೊತ್ತಿನಲ್ಲೇ ಎದೆ ನೋವು ಜಾಸ್ತಿ ಆಗಿ ಜತಿನ್ ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾನೆ.
ಯುವಕ ಪ್ರಾಣಬಿಟ್ಟ ವಿಚಾರವನ್ನು ಸ್ನೇಹಿತರು ಕೂಡಲೇ ಸ್ಥಳೀಯರ ಸಹಾಯದಿಂದ ಪೊಲೀಸರಿಗೆ ತಿಳಿಸಿದ್ದು, ಅವರು ಸ್ಥಳಕ್ಕೆ ದೌಡಾಯಿಸಿದರು. ನಂತರ ಬೆಟ್ಟದ ತುದಿಯಿಂದ ಕಚ್ಚಾರಸ್ತೆಯಲ್ಲಿ ಹರಸಾಹಸಪಟ್ಟು ಮೃತದೇಹವನ್ನು ಪೊಲೀಸರು ತಂದಿದ್ದಾರೆ. ಈ ಘಟನೆಯ ಬಗ್ಗೆ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -