- Advertisement -
- Advertisement -
ಸ್ನಾನಕ್ಕೆಂದು ತೆರಳಿದ ಯುವಕ ನೀರಿನಲ್ಲಿ ಮುಳುಗಿ ಸಾವಿಗೀಡಾದ ಘಟನೆ ಮಡಿಕೇರಿಯ ಗುಡ್ಡೆಹೊಸೂರು ಬಳಿ ಕಾವೇರಿ ನದಿಯಲ್ಲಿ ನಡೆದಿದೆ.
ಮೃತಪಟ್ಟ ಯುವಕ ಏಳನೇ ಹೊಸಕೋಟೆಯ ತೊಂಡೂರು ನಿವಾಸಿ ಸುರೇಶ್ ಆಚಾರ್ಯ ಎಂಬುವವರ ಪುತ್ರ ಪ್ರದೀಪ್ (19) ಎಂದು ಗುರುತಿಸಲಾಗಿದೆ.
ಬುಧವಾರ ತನ್ನ ಸ್ನೇಹಿತರೊಂದಿಗೆ ಗುಡ್ಡೆಹೊಸೂರು ಸಮೀಪದ ಬಾಳುಗೋಡು ಎಂಬಲ್ಲಿಗೆ ತೆರಳಿದ ಪ್ರದೀಪ ಕಾವೇರಿ ನದಿಗೆ ಇಳಿದಿದ್ದ. ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಮೃತದೇಹವನ್ನು ಹೊರತೆಗೆದಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -