- Advertisement -
- Advertisement -
ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರು ಮೂಲದ ಯುವಕನೊಬ್ಬ ಈಜಲು ಹೋಗಿ ಭದ್ರಾ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೆಬ್ಬಾಳೆಯ ಭದ್ರಾ ನದಿಯಲ್ಲಿ ನಡೆದಿದೆ.
ಮೃತ ಯುವಕನನ್ನು ಬೆಂಗಳೂರಿನ ಶ್ರೀನಗರದ ನಿವಾಸಿ ಗೋಕುಲ್(25) ಎಂದು ಗುರುತಿಸಲಾಗಿದೆ. ಕಳಸ ಪೊಲೀಸರು, ಮುಳುಗು ತಜ್ಞರ ಸಹಾಯದಿಂದ ಯುವಕನ ಮೃತ ದೇಹವನ್ನು ಪತ್ತೆ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -