- Advertisement -
- Advertisement -


ರಾಯಚೂರು: ಯುವತಿ ಪ್ರೀತಿ ನಿರಾಕರಿಸಿದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ತಾಲ್ಲೂಕಿನ ಮಲಿಯಾಬಾದ್ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಮಡ ಯುವಕ ರಾಯಚೂರು ತಾಲ್ಲೂಕಿನ ಗಧಾರ್ ಗ್ರಾಮದ ಹನುಮೇಶ್( 21) ಎಂದು ಗುರುತಸಲಾಗಿದೆ.
ಯುವಕ ಹನುಮೇಶ್ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ನಗರದ ನವಯುಗ ಕಾಲೇಜಿನ ವಿದ್ಯಾರ್ಥಿಯಾಗಿದ್ದನು. ಮದುವೆಗೆ ಯುವತಿ ಮನೆಯವರು ನಿರಾಕರಿಸಿದಕ್ಕೆ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮಾಹಿತಿ ತಿಳಿದು ಸ್ಥಳಕ್ಕೆ ಯರಗೇರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೀರಿನಲ್ಲಿ ಬಿದ್ದ ಯುವಕನ ಮೃತದೇಹವನ್ನು ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -