Saturday, June 28, 2025
spot_imgspot_img
spot_imgspot_img

ಮದುವೆಗೆ ನಿರಾಕರಿಸಿದ ಯುವತಿಗೆ ಚಾಕು ಇರಿತ…!

- Advertisement -
- Advertisement -

ಮದುವೆಗೆ ನಿರಾಕರಿಸಿದ ಕಾರಣಕ್ಕೆ ಯುವತಿಗೆ ಭಗ್ನ ಪ್ರೇಮಿಯೊಬ್ಬ ಚಾಕುವಿನಿಂದ ಇರಿದಿರುವ ಘಟನೆ ಶಿವಮೊಗ್ಗ ನಗರದ ಶಿವಪ್ಪ ನಾಯಕ ಸರ್ಕಲ್ ಬಳಿ ನಡೆದಿದೆ. 22 ವರ್ಷದ ಅಂಬಿಕಾ ಚೂರಿ ಇರಿತಕ್ಕೋಳಗಾದ ಯುವತಿ.

ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ನಗರದ ಮೆಟ್ರೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ 28 ವರ್ಷದ ಚೇತನ್​ನನ್ನು ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಹಲ್ಲೆಗೊಳಗಾದ ಯುವಕನೂ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾನೆ.

ಅಂಬಿಕಾ ಮನೆಯವರ ಜೊತೆ ಮದುವೆ ಮಾಡಿಕೊಡುವಂತೆ ಯುವಕ ಚೇತನ್ ಪ್ರಸ್ತಾಪಿಸಿದ್ದ, ಆದರೇ, ಹುಡುಗಿಯ ಮನೆಯವರು ಮದುವೆಗೆ ನಿರಾಕರಿಸಿದ್ದರು. ಇದರಿಂದ ಆಕ್ರೋಶಗೊಂಡ ಯುವಕ, ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಚಾಕುವಿಂದ ಇರಿದಿದ್ದಾನೆ. ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement -

Related news

error: Content is protected !!