- Advertisement -
- Advertisement -
ಯುವತಿಯೊಬ್ಬಳು ಕಾಣೆಯಾದ ಘಟನೆ ಯಲ್ಲಾಪುರದಲ್ಲಿ ನಡೆದಿದೆ.
ಕಾಣೆಯಾದ ಯುವತಿ ಯಲ್ಲಾಪುರ ತಾಲೂಕಿನ ಚಂದ್ರುಳಿಯ ದೇಸಾಯಿಮನೆ ತೇಜಾ ರಾಮಕೃಷ್ಣ ಭಟ್ಟ (26) ಎಂದು ಗುರುತಿಸಲಾಗಿದೆ.
ಹುಬ್ಬಳ್ಳಿಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಈಕೆ, ಹುಬ್ಬಳ್ಳಿಗೆ ಹೋಗುವುದಾಗಿ ಮನೆಯಿಂದ ಹೊರಟಿದ್ದು, ಅಲ್ಲಿಗೂ ಹೋಗದೇ ಸಂಬಂಧಿಕರ ಮನೆಗೂ ಹೋಗದೇ ಈವರೆಗೂ ಮರಳಿ ಬಂದಿಲ್ಲ.
ಈ ಕುರಿತು ತಂದೆ ರಾಮಕೃಷ್ಣ ಎಸ್ ಭಟ್ಟ ದೇಸಾಯಿಮನೆ ಪೋಲಿಸ್ ದೂರು ನೀಡಿದ್ದಾರೆ. ಸಾಧಾರಣ ಮೈಕಟ್ಟು, ಗೋಧಿ ಬಣ್ಣ, ಕಪ್ಪು ಕೂದಲು ಹೊಂದಿದ್ದು, ಕನ್ನಡ, ಇಂಗ್ಲಿಷ್ ಮಾತನಾಡುತ್ತಾಳೆ. ಈಕೆ ಎಲ್ಲಿಯಾದರೂ ಕಂಡು ಬಂದಲ್ಲಿ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸರು ಕೋರಿದ್ದಾರೆ.
- Advertisement -