Friday, May 17, 2024
spot_imgspot_img
spot_imgspot_img

ಮಂಗಳೂರು: ಹಿಂದೂ ಯುವ ಸೇನೆ ಕಾರ್ಯಕರ್ತ ಆತ್ಮಹತ್ಯೆ

- Advertisement -G L Acharya panikkar
- Advertisement -
astr

ಮಂಗಳೂರು: ಕುಂಪಲ ಹನುಮಾನ್ ನಗರದ ಹಿಂದೂ ಕಾರ್ಯಕರ್ತರೊಬ್ಬರು ತಮ್ಮ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆಪ್ಟಂಬರ್‌ 3ರ ಶನಿವಾರ ನಡೆದಿದೆ.

ಜಯಂತ್ ಎಸ್. ಕುಂಪಲ (49) ಆತ್ಮಗತ್ಯೆಗೆ ಶರಣಾದವರು. ಹಿಂದೂ ಯುವ ಸೇನೆಯ ಸಕ್ರಿಯ ಕಾರ್ಯಕರ್ತರಾಗಿದ್ದ ಅವರು, ಅಟೋ ರಿಕ್ಷಾ ಓಡಿಸಿ ಜೀವನ ಸಾಗಿಸುತ್ತಿದ್ದರು. ಹನುಮಾನ್ ನಗರದಲ್ಲಿ ಹೊಸ ಮನೆ ನಿರ್ಮಿಸುತ್ತಿದ್ದು, ಇದರ ಅಂತಿಮ ಹಂತದ ಕೆಲಸ ನಡೆಯುತ್ತಿತ್ತು. ಹಿಂದೂ ಯುವ ಸೇನಾದ ಆರಂಭಿಕ ದಿನಗಳಲ್ಲಿ ನಾಯಕನಾಗಿ ಕೆಲಸ ಮಾಡಿದ್ದರು.

ಜಯಂತ್ ಅವರು ಸೆಪ್ಟಂಬರ್‌ 2ರಂದು ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ಅವರ ಸ್ಮಾರ್ಟ್‌ಫೋನ್‌ನ್ನು ಕಳೆದುಕೊಂಡಿದ್ದರು. ಇದೇ ಕಾರಣದಿಂದ ಅವರು ಮಂಕಾಗಿದ್ದರು. ಅಲ್ಲದೆ ಶನಿವಾರ ಮಧ್ಯಾಹ್ನದವರೆಗೂ ತಮ್ಮ ಆತ್ಮೀಯರಲ್ಲಿ ಮೊಬೈಲ್ ಫೋನ್ ಕಳೆದು ಹೋಗಿರುವ ವಿಚಾರವನ್ನು ಹೇಳಿಕೊಂಡು ಬೇಸರ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಸಂಜೆ ಪತ್ನಿ ಕೆಲಸ ಮುಗಿಸಿ ಮನೆಗೆ ಹಿಂತಿರುಗಿದ ವೇಳೆ ಘಟನೆ ಬೆಳಕಿಗೆ ಬಂದಿದೆ. ಮೃತರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.

- Advertisement -

Related news

error: Content is protected !!