- Advertisement -
- Advertisement -
ಎರಡು ವರ್ಷ ನಾಲ್ಕು ತಿಂಗಳ ಗಂಡು ಮಗುವನ್ನು ಅಪಹರಣ ಮಾಡಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರುಗಮಲ್ಲ ಗ್ರಾಮದಲ್ಲಿ ನಡೆದಿದೆ. ಅಜ್ಜಿ ತಾತ ತಾಯಿಯ ಜೊತೆ ಅಮ್ಮಜಾನ್ ಬಾವಜಾನ್ ದರ್ಗಾಕ್ಕೆ ಆಗಮಿಸಿದ್ದ ವೇಳೆ ಕಿಡ್ನಾಪ್ ಮಾಡಲಾಗಿದೆ.
ಬೆಂಗಳೂರು ಮೂಲದ ಜಬೀವುಲ್ಲಾ ಹಾಗೂ ಸುಮೈಯಾ ದಂಪತಿಯ ಮಗು ಜಾವೀದ್ ತನ್ನ ಅಜ್ಜ, ಅಜ್ಜಿ ಮತ್ತು ತಾಯಿಯೊಂದಿಗೆ ಮುರುಗಮಲ್ಲ ದರ್ಗಾಕ್ಕೆ ಆಗಮಿಸಿದ್ದಾನೆ. ದರ್ಗಾ ಒಳಗೆ ಹೋಗುತ್ತಿದ್ದಾಗ ಜನಸಂದಣಿ ನಡುವೆ ಮಗುವನ್ನು ಅಪಹರಣ ಮಾಡಲಾಗಿದೆ. ದೃಶ್ಯಾವಳಿ ದರ್ಗಾದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಮಗನನ್ನು ಕಳೆದುಕೊಂಡು ಕಣ್ಣೀರು ಹಾಕುತ್ತಿರುವ ಪೋಷಕರು, ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ. ಮಗು ಪತ್ತೆ ಮಾಡಿಕೊಡುವಂತೆ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ತನಿಖೆ ಆರಂಭಿಸಿದ್ದಾರೆ.
- Advertisement -