Tuesday, May 14, 2024
spot_imgspot_img
spot_imgspot_img

ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಅಭಿನವ ಹಾಲಶ್ರೀ ಸ್ವಾಮೀಜಿ

- Advertisement -G L Acharya panikkar
- Advertisement -

ಬೆಂಗಳೂರು: ಉದ್ಯಮಿ ಗೋವಿಂದ ಬಾಬು ಪೂಜಾರಿ ಮಾಡಿರುವ ವಂಚನೆ ಆರೋಪ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಬಂಧನಕ್ಕೆ ಒಳಗಾಗಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಯಾಗಿರುವ ಅಭಿನವ ಹಾಲಶ್ರೀ ಸ್ವಾಮೀಜಿ ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಪ್ರಕರಣದ 3ನೇ ಆರೋಪಿಯಾಗಿರುವ ಅಭಿನವ ಹಾಲಶ್ರೀ CCH-57ನೇ ಕೋರ್ಟ್​ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ನಿನ್ನೆ ಸಂಜೆ ಅರ್ಜಿ ಸಲ್ಲಿಕೆ ಮಾಡಿದ್ದು, ನಾಳೆ ಕೋರ್ಟ್ ವಿಚಾರಣೆ ನಡೆಸಲಿದೆ.

ಕಳೆದ ದಿನ(ಸೆ.14) ಸಿಸಿಬಿ ಕಚೇರಿಗೆ ತೆರಳುತ್ತಿದ್ದ ವೇಳೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಚೈತ್ರ ಕುಂದಾಪುರ, ಈ ಕೇಸ್ ನಲ್ಲಿ ಸ್ವಾಮೀಜಿ ಒಬ್ಬರಿದ್ದಾರೆ. ಅವರನ್ನು ಬಂಧಿಸಿದರೆ ಎಲ್ಲಾ ಸತ್ಯಗಳು ಹೊರ ಬರುತ್ತದೆ, ಇದರಲ್ಲಿ ದೊಡ್ಡ ದೊಡ್ಡವರು ಇದ್ದಾರೆ. ಕ್ಯಾಂಟೀನ್ ಬಿಲ್ ಗಾಗಿ ಈ ರೀತಿ ಷಡ್ಯಂತ್ರ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಹೇಳಿಕೆ ಬೆನ್ನಲ್ಲೇ ನಾಪತ್ತೆ ಆಗಿರುವ ಸ್ವಾಮೀಜಿ ಬಂಧನಕ್ಕೆ ಮತ್ತಷ್ಟು ಆಗ್ರಹಗಳು ಕೇಳಿಬಂದಿದ್ದವು.

- Advertisement -

Related news

error: Content is protected !!