



ಪ್ರಧಾನಿ ನರೇಂದ್ರ ಮೋದಿಯವರು ತನ್ನ ಸರಕಾರದ ಮುಂಚೂಣಿ ಆರೋಗ್ಯ ವಿಮೆ ಕಾರ್ಯಕ್ರಮ ಆಯುಷ್ಮಾನ ಭಾರತ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯನ್ನು ಮಂಗಳವಾರ 70 ವರ್ಷ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರಿಗಾಗಿ ವಿಸ್ತರಿಸಿದರು.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು,70 ವರ್ಷ ಮೇಲ್ಪಟ್ಟವರು ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆಯಲು ‘ಆಯುಷ್ಮಾನ ವಯ ವಂದನಾ ‘ಕಾರ್ಡ್ನ್ನು ಹೊಂದಿರುವುದು ಅಗತ್ಯವಾಗಿದೆ ಎಂದು ತಿಳಿಸಿದರು.
ಆದರೆ ದಿಲ್ಲಿ ಮತ್ತು ಪಶ್ಚಿಮ ಬಂಗಾಳ ಗಳಲ್ಲಿಯ 70 ವರ್ಷ ಮೇಲ್ಪಟ್ಟವರು ಈ ಯೋಜನೆಯ ಲಾಭಗಳನ್ನು ಪಡೆಯಲು ಸಾಧ್ಯವಿಲ್ವಏಕೆಂದರೆ ಅವರ ಸರಕಾರಗಳು ‘ರಾಜಕೀಯ ಕಾರಣಗಳಿಂದಾಗಿ’ ಅದನ್ನು ಜಾರಿಗೊಳಿಸುತ್ತಿಲ್ಲ ಎಂದು ಮೋದಿ ಹೇಳಿದರು.
ಆದಾಯ ಸ್ಥಿತಿಗತಿಯನ್ನು ಹೊರತುಪಡಿಸಿ 70 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಆಯುಷ್ಮಾನ್ ಭಾರತ ಯೋಜನೆಯಡಿ ವಿಮೆ ಸೌಲಭ್ಯ ಒದಗಿಸುವುದರಿಂದ ಅಂದಾಜು 6 ಕೋಟಿ ಜನರಿಗೆ, ಸರಿಸುಮಾರು 4.5 ಕೋಟಿ ಕುಟುಂಬಗಳಿಗೆ ನೆರವಾಗಲಿದೆ ಎಂದು ಮೂಲಗಳು ತಿಳಿಸಿವೆ.
ಬಡವರು, ಶ್ರೀಮಂತರು ಎನ್ನದೆ 70 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಯೋಜನೆಯ ಫಲಾನುಭವಿಯಾಗಲು ಅರ್ಹರಾಗಿರುತ್ತಾರೆ. ಇವರು ವಾರ್ಷಿಕ ₹5 ಲಕ್ಷದವರೆಗೆ ಉಚಿತ ಚಿಕಿತ್ಸೆಯನ್ನು ಪಡೆಯಬಹುದಾಗಿದೆ ಎಂದು ಹೇಳಿದರು.
ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋದಿಯವರು ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಸುಮಾರು 12,850 ಕೋ.ರೂ. ವೆಚ್ಚದ ಹಲವಾರು ಯೋಜನೆಗಳಿಗೆ ಚಾಲನೆ ನೀಡಿದರು,ಉದ್ಘಾಟಿಸಿದರು ಮತ್ತು ಶಿಲಾನ್ಯಾಸ ನೆರವೇರಿಸಿದರು.