Tuesday, July 28, 2026
spot_imgspot_img
spot_imgspot_img

ಬೈಕ್‌ ಡಿಕ್ಕಿಯಾಗಿ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ

- Advertisement -
- Advertisement -

ಚಿತ್ರದುರ್ಗ: ಬೈಕ್‌ ಢಿಕ್ಕಿಯಾಗಿ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರು ಗಾಯಗೊಂಡಿರುವ ಘಟನೆ ಹಿರಿಯೂರು ತಾಲೂಕಿನ ಜೆಜೆ ಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ.ಜೆಜೆ ಹಳ್ಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಎಳನೀರು ಕುಡಿಯಲು ಉಪ ಸಭಾಪತಿ ಅವರ ಕಾರು ನಿಲ್ಲಿಸಲಾಗಿತ್ತು. ಈ ವೇಳೆ ಬೈಕ್ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಉಪಸಭಾಪತಿ ಲಾಮಾಣಿ ಅವರಿಗೆ ಗಾಯಗಳಾಗಿವೆ.

ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಪಿಐ ಶಿವಕುಮಾ‌ರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆ ಗಾಗಿ ರುದ್ರಪ್ಪ ಲಮಾಣಿ ಅವರನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!