- Advertisement -
- Advertisement -



ವಿಟ್ಲ-ಸಾಲೆತ್ತೂರು ರಸ್ತೆಯ ಕಡಂಬು ರಾದುಕಟ್ಟೆಯಲ್ಲಿ ಮಂಗಳೂರು ಕಡೆಗೆ ಹೋಗುತ್ತಿದ್ದ ಮಹೇಶ್ ಹೆಸರಿನ ಖಾಸಗಿ ಬಸ್ ಹಿಂಭಾಗಕ್ಕೆ ಪಿಕಪ್ ವಾಹನ ಬಲವಾಗಿ ಡಿಕ್ಕಿ ಹೊಡೆದಿದೆ. ಅಷ್ಟಕ್ಕೂ ನಿಲ್ಲದ ಪಿಕಪ್ ವಾಹನ ರಸ್ತೆ ಬದಿಯ ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದು ನಿಂತಿದೆ.
ಅಪಘಾತಕ್ಕೀಡಾದಾಗಿ ಬಸ್ಸಿನ ಪ್ರಯಾಣಿಕರು ಮತ್ತು ಪಿಕಪ್ ಚಾಲಕ ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೇ ಪಾರಾಗಿದ್ದಾರೆ.ಬಸ್ಸು ಡಿಕ್ಕಿ ಹೊಡೆದ ರಭಸಕ್ಕೆ ಬಸ್ಸಿನ ಹಿಂಬದಿ ಜಖಂಗೊಂಡಿದ್ದು ಎರಡು ವಿದ್ಯುತ್ ಕಂಬಗಳು ತುಂಡಾಗಿದೆ. ಪಿಕಪ್ ವಾಹನ ಭಾರೀ ಪ್ರಮಾಣದಲ್ಲಿ ಜಖಂಗೊಂಡಿದ್ದು ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
- Advertisement -