Sunday, June 29, 2025
spot_imgspot_img
spot_imgspot_img

ನಿಂತಿದ್ದ ಟ್ಯಾಂಕರ್‌ಗೆ ಕಾರು ಡಿಕ್ಕಿ – 12 ಸಾವು, ಇಬ್ಬರು ಗಂಭೀರ

- Advertisement -
- Advertisement -

ರಸ್ತೆಯ ಬದಿಯಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಕಾರು ಡಿಕ್ಕಿಯಾಗಿ 12 ಮಂದಿ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರದ ಚಿತ್ರಾವತಿ ಬಳಿ ನಡೆದಿದೆ.

ಆಂಧ್ರಪ್ರದೇಶ ನೋಂದಣಿಯ ಟಾಟಾ ಸುಮೋ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ. ಇಂದು ಬೆಳಗ್ಗೆ 6:30ರ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ಇಂದು ಬೆಳಗ್ಗೆ ಅತಿಯಾದ ಮಂಜು ಇತ್ತು. ಈ ಕಾರಣಕ್ಕೆ ಚಾಲಕನಿಗೆ ರಸ್ತೆಯ ಗುರುತಿ ಸಿಗದೇ ನಿಂತಿದ್ದ ಟ್ಯಾಂಕರ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿರಬಹುದು ಎಂದು ಶಂಕಿಸಲಾಗಿದೆ.

ಹೈದರಾಬಾದ್ – ಬೆಂಗಳೂರು ಹೈವೇಯಲ್ಲಿ ರಸ್ತೆಯ ಗುರುತು ಸಿಗದೇ ಈ ಕಾರು ಗುದ್ದಿರಬಹುದು. ಕಾರಿನಲ್ಲಿದ್ದ 14 ಮಂದಿ 10 ಮಂದಿ ಸ್ಥಳದಲ್ಲೇ ಸಾವನಪ್ಪಿದ್ದರೆ ಇಬ್ಬರು, ಮೂವರು ಮಾತ್ರ ಉಸಿರಾಡುತ್ತಿದ್ದರು ಹಾಗೂ ಕಾರಿನಲ್ಲಿದ್ದ ಪ್ರಯಾಣಿಕರ ಗುರುತು ಇನ್ನೂ ಸಿಕ್ಕಿಲ್ಲ. ಮಾಹಿತಿ ಪ್ರಕಾರ ಬೆಂಗಳೂರಿನ ಕಾಮಾಕ್ಷಿಪಾಳ್ಯದ ಸುಜತಾ ಎಂಬವರ ಆಧಾರ್ ಕಾರ್ಡ್ ಕಾರಿನಲ್ಲಿ ಸಿಕ್ಕಿದೆ. ಮೃತ ಮಹಿಳೆಯರ ಆಭರಣ ಧರಿಸಿದ್ದು, ಯಾವುದೋ ಶುಭ ಕಾರ್ಯಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ.

- Advertisement -

Related news

error: Content is protected !!