Friday, May 3, 2024
spot_imgspot_img
spot_imgspot_img

ಪಡುಬಿದ್ರೆ : ಬೈಕ್ ಸವಾರನ ಮೇಲೆ ಟ್ಯಾಂಕರ್ ಲಾರಿ ಹರಿದು ಸವಾರ ಸ್ಥಳದಲ್ಲೇ ಮೃತ್ಯು

- Advertisement -G L Acharya panikkar
- Advertisement -

ಪಡುಬಿದ್ರೆ : ಪ್ರಯಾಣಿಕರನ್ನು ಇಳಿಸಲು ನಿಂತಿದ್ದ ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದು ರಸ್ತೆಗೆ ಎಸೆಲ್ಪಟ್ಟು ಬೈಕ್ ಸವಾರನ ಮೇಲೆ ಟ್ಯಾಂಕರ್ ಲಾರಿ ಹರಿದು ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರೆ ಪೇಟೆಯ ಬಸ್ ನಿಲ್ದಾಣದ ಬಳಿ ‌ ನಡೆದಿದೆ.

ಮೃತನನ್ನು ಕಂಚಿನಡ್ಕ ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಗೆ ತೆರಳುವ ಬಸ್ ಪ್ರಯಾಣಿಕರನ್ನು ಇಳಿಸಲು ನಿಲ್ಲಿಸದ ವೇಳೆ ಪ್ರಜ್ವಲ್ ಬಸ್ ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ.

ಈ ಪರಿಣಾಮ ಪ್ರಜ್ವಲ್ ರಸ್ತೆಗೆ ಎಸೆಯಲ್ಪಟ್ಟಿದ್ದ, ಈ ವೇಳೆ ಟ್ಯಾಂಕರ್ ಅವರ ಮೇಲೆ ಹರಿದು ಪ್ರಜ್ವಲ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪಡುಬಿದ್ರೆ ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ಥಳ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!