- Advertisement -
- Advertisement -


ಬಂಟ್ವಾಳ: ಪಾದಚಾರಿ ಮಹಿಳೆಗೆ ಪಿಕಪ್ ವಾಹನ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಘಟನೆ ವಾಮದಪದವಿನಲ್ಲಿ ನಡೆದಿದೆ.
ಪಿಲಿಮೊಗರು ಗ್ರಾಮದ ಜತ್ತನಕೆರೆ ನಿವಾಸಿ ಪುಷ್ಪಾವತಿ ( 70) ಎಂಬವರು ಗಾಯಗೊಂಡ ಮಹಿಳೆ.
ಬೆಂಜನಪದವಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸಂಬಂಧಿ ಬಾಲಕನ ಅಂತ್ಯ ಸಂಸ್ಕಾರದ ಕಾರ್ಯ ಮುಗಿಸಿ ವಾಪಸು ಮಗನ ಜೊತೆಗೆ ಬೈಕಿನಲ್ಲಿ ಬರುವ ವೇಳೆ ಮಳೆ ಬಂದ ಕಾರಣ ತಾಯಿಯನ್ನು ಮಗ ಬಸ್ ನಲ್ಲಿ ಕಳುಹಿಸಿದ್ದ ಎಂದು ತಿಳಿದು ಬಂದಿದೆ. ಬಿಸಿರೋಡಿನಿಂದ ಬಸ್ ನಲ್ಲಿ ಬಂದು ವಾಮದಪದವಿನಲ್ಲಿ ಇಳಿದು ಮನೆ ಕಡೆಗೆ ಹೋಗುವ ವೇಳೆ ಪಿಕಪ್ ಇವರಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಇವರು ಡಾಮರು ರಸ್ತೆಗೆ ಎಸೆಯಲ್ಪಟ್ಟು,, ತಲೆಗೆ ಗಂಭೀರವಾದ ಗಾಯವುಂಟಾಗಿದೆ. ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -