Friday, June 27, 2025
spot_imgspot_img
spot_imgspot_img

ಬೋರ್ ವೆಲ್ ಲಾರಿ ಕಾರಿಗೆ ಢಿಕ್ಕಿ ಹೊಡೆದು ದಕ್ಷಿಣ ಕನ್ನಡದ ಇಬ್ಬರು ಸಾವು – ಬೆಂಗಳೂರಿನಲ್ಲಿ ಕಂಬಳ ವೀಕ್ಷಿಸಿ ವಾಪಾಸ್ಸಾಗುತ್ತಿದ್ದಾಗ ನಡೆದ ಘಟನೆ

- Advertisement -
- Advertisement -

ಬೋರ್ ವೆಲ್ ಹಾಗೂ ಕಾರು ನಡುವೆ ಭೀಕರ ಢಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂರು ಮಂದಿ ಗಾಯಗೊಂಡಿರುವ ಘಟನೆ ರಾಜ್ಯ ಹೆದ್ದಾರಿ 33 ತಾಲೂಕಿನ ಕೊತ್ತಗೆರೆ ಹೋಬಳಿ ಚಿಗಣಿ ಪಾಳ್ಯ ಗ್ರಾಮದ ಬಳಿ ಭಾನುವಾರ (ನ.26 ರಂದು) ಮುಂಜಾನೆ ಸಂಭವಿಸಿದೆ.

ಮಂಗಳೂರಿನ ಬಜಪೆ ಮೂಲದ ಕಿಶಾನ್ ಶೆಟ್ಟಿ( 20 ) ದಕ್ಷಿಣ ಕನ್ನಡ ಜಿಲ್ಲೆ ಭಟ್ಟರ ತೋಟ ಗ್ರಾಮದ ಫಿಲೀಪ್ ನೇರಿ ಲೋಬೋ (32) ಮೃತ ದುರ್ಧೈವಿಗಳು ನಿತೀಶ್ ಭಡಾರಿ, ಪ್ರೀತಿ ಲೋಬೋ, ಹರೀಶ್ ತೀವ್ರವಾಗಿ ಗಾಯಗೊಂಡು ಅದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಶನಿವಾರ ನಡೆಯುತ್ತಿದ್ದ ಕಂಬಳವನ್ನು ನೋಡಿಕೊಂಡು ತಮ್ಮ ಊರಿಗೆ ಮಂಗಳೂರಿಗೆ ವಾಪಸ್ ಆಗುತ್ತಿದ್ದ ವೇಳೆ ಕುಣಿಗಲ್ ಕಡೆಯಿಂದ ತುಮಕೂರು ಕಡೆಗೆ ಹೊಗುತ್ತಿದ್ದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಕಿಶಾನ್ ಶೆಟ್ಟಿ ಹಾಗೂ ಅವರ ಸ್ನೇಹಿತರು ನೆಲಮಂಗಲ ಹಾಗೂ ಕುಣಿಗಲ್ ಮಾರ್ಗವಾಗಿ ಮಂಗಳೂರಿಗೆ ಹೋಗಬೇಕಾಗಿತ್ತು. ಆದರೆ ದಾರಿ ತಪ್ಪಿ ತುಮಕೂರಿಗೆ ಹೋಗಿ ಬಳಿಕ ಹೆಬ್ಬರು ಮಾರ್ಗವಾಗಿ ಕುಣಿಗಲ್ ನಿಂದ ಮಂಗಳೂರಿಗೆ ತೆರಳುತ್ತಿರ ಬೇಕಾದರೆ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

- Advertisement -

Related news

error: Content is protected !!