- Advertisement -
- Advertisement -



ಒಡಿಶಾದ ಐತಿಹಾಸಿಕ ಪುರಿ ಜಗನ್ನಾಥ ರಥಯಾತ್ರೆಯಲ್ಲಿ ರಥ ಎಳೆಯುವ ವೇಳೆ ನೂಕುನುಗ್ಗಲು ಉಂಟಾಗಿದ್ದರಿಂದ ಉಸಿರುಗಟ್ಟಿ ಓರ್ವ ಭಕ್ತ ಸಾವನ್ನಪ್ಪಿದ್ದು, 400ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.
ರಥ ಎಳೆಯುವಾಗ ನೂಕುನುಗ್ಗಲು ಉಂಟಾಗಿದ್ದು, ಉಸಿರಾಡಲು ಆಗದೇ ಓರ್ವ ಭಕ್ತ ಮೃತಪಟ್ಟಿದ್ದಾರೆ. ನೂಕುನುಗ್ಗಲು ಬಳಿಕ ಕಾಲ್ತುಳಿತವೂ ಉಂಟಾಗಿದ್ದು, 400ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
- Advertisement -








