- Advertisement -
- Advertisement -
ಬೈಕ್ ಮತ್ತು ಕಾರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಮೇಲಿದ್ದ ಕಾರಾಗೃಹ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದ ಬಳಿ ನಡೆದಿದೆ.
ಮೃತಪಟ್ಟವರನ್ನು ಕಾರಾಗೃಹ ಸಿಬ್ಬಂದಿಯನ್ನು ರುದ್ರಪ್ಪ ಸಿದ್ದಣ್ಣವರ ಎಂದು ಗುರುತಿಸಲಾಗಿದೆ.
ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಪೇದೆಯಾಗಿ ಕೆಲಸ ಮಾಡುತಿದ್ದರು. ಕರ್ತವ್ಯ ಮುಗಿಸಿ ವಾಪಸ್ ತನ್ನ ಗ್ರಾಮಕ್ಕೆ ಹೋಗುವಾಗ ಕಾರು ರುದ್ರಪ್ಪ ಅವರ ಬೈಕ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಅವರು ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಅತ್ತ ಕಾರು ಪಲ್ಟಿ ಹೊಡೆದಿದೆ. ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
- Advertisement -