Saturday, June 28, 2025
spot_imgspot_img
spot_imgspot_img

ಬೈಕ್ ಟ್ಯಾಂಕರ್ ಲಾರಿ ನಡುವೆ ಅಪಘಾತ; ಸವಾರರಿಬ್ಬರು ಸಾವು..!

- Advertisement -
- Advertisement -

ದ್ವಿಚಕ್ರ ವಾಹನ ಹಾಗೂ ಟ್ಯಾಂಕರ್ ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರಾಗಿದ್ದ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಮಲ್ಲೂಪುರ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟವರನ್ನು ತಗಡೂರು ಗ್ರಾಮದ ಶಿವಮಲ್ಲೆಡಗೌಡ ಎಂಬವರ ಪುತ್ರ ಮಹೇಶ್ (24), ಹಾಗೂ ಗ್ರಾಮದ ನಾಗರಾಜು ಎಂಬವರ ಪುತ್ರ ಮಹೇಶ್ (23) ಎಂದು ಗುರುತಿಸಲಾಗಿದೆ.

ನಂಜನಗೂಡು ತಾಲೂಕಿನ ಅಳಗಂಚಿ ಗ್ರಾಮದ ಬಣ್ಣಾರಿ ಅಮ್ಮನ್ ಸಕ್ಕರ್ ಕಾರ್ಖಾನೆಯಲ್ಲಿ ಕೂಲಿ ಕಾರ್ಮಿಕರಾಗಿದ್ದ ಈ ಯುವಕರು ಕಾರ್ಖಾನೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಟ್ಯಾಂಕರ್ ಲಾರಿ ಚಾಲಕ ಸ್ಥಳದಿಂದ ನಾಪತ್ತೆಯಾಗಿದ್ದಾನೆ. ಪರಿಣಾಮ ಒಬ್ಬ ಬೈಕ್‌ ಸವಾರ ಸ್ಥಳದಲ್ಲಿಯೇ ಮೃತಪಟ್ಟು, ಇನ್ನೊರ್ವ ಯುವಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ತೆರಳುವ ವೇಳೆ ಮಾರ್ಗ ಮಧ್ಯೆ ಸಾವನಪ್ಪಿದ್ದಾನೆ. ಇವರಿಬ್ಬರೂ ಚಿಕ್ಕವಯಸ್ಸಿನಿಂದಲೂ ಗೆಳಯರಾಗಿದ್ದರು.

ಬಿಳಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಬಿಳಿಗೆರೆ ಪೊಲೀಸರು ಭೇಟಿ ನೀಡಿ, ಟ್ಯಾಂಕರ್ ಲಾರಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ಯುವ ಕಾರ್ಮಿಕರ ಶವವನ್ನು ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

- Advertisement -

Related news

error: Content is protected !!