Thursday, May 2, 2024
spot_imgspot_img
spot_imgspot_img

ಬಸ್‌ ಬೈಕ್ ನಡುವೆ ಅಪಘಾತ; ಸವಾರ ಸಾವು..!

- Advertisement -G L Acharya panikkar
- Advertisement -

ಕೆಎಸ್‌ಆರ್‌ಟಿಸಿ ಬಸ್‌ ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನ ಯಶವಂತಪುರ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ.

ಮೃತಪಟ್ಟ ವ್ಯಕ್ತಿ ನಾಗಸಂದ್ರ ನಿವಾಸಿ ರಾಜೇಂದ್ರ (45) ಎಂದು ಗುರುತಿಸಲಾಗಿದೆ.

ಬೆಳಗ್ಗೆ ಉದ್ಯೋಗಕ್ಕೆ ತೆರಳುತ್ತಿರುವ ವೇಳೆ ರಸ್ತೆಯ ಎಡಬದಿಯಲ್ಲಿ ಚಲಿಸುತ್ತಿದ್ದ ರಾಜೇಂದ್ರ ಮೊಪೆಡ್‌ ಗೆ ಬಲಬದಿಯಿಂದ ಬೆಂಗಳೂರು – ತುರುವೇಕರೆ ಬಸ್‌ ಡಿಕ್ಕಿ ಹೊಡೆದಿತ್ತು. ತಲೆಗೆ ಪೆಟ್ಟು ಬಿದ್ದ ತೀವ್ರವಾದ ರಕ್ತಸ್ರಾವವಾದ ಕಾರಣದಿಂದ ರಾಜೇಂದ್ರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಯಶವಂತಪುರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!