Saturday, May 18, 2024
spot_imgspot_img
spot_imgspot_img

ಕಾರು ಮತ್ತು ಬೈಕ್ ನಡುವೆ ಅಪಘಾತ; ಓರ್ವ ಸಾವು, ಮತ್ತೋರ್ವ ಗಂಭೀರ..!

- Advertisement -G L Acharya panikkar
- Advertisement -

ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಶಿರಹಟ್ಟಿ ತಾಲೂಕಿನ ದೇವಿಹಾಳ ಗ್ರಾಮದ ಬಳಿ ನಡೆದಿದೆ.

ಮೃತಪಟ್ಟ ವ್ಯಕ್ತಿ ದೇವಿಹಾಳ ಗ್ರಾಮ ಪಂಚಾಯತಿ ಸದಸ್ಯ ಯಲ್ಲಪ್ಪ (48) ಗಂಭೀರ ಗಾಯಗೊಂಡ ಬೈಕ್​ ಹಿಂಬದಿ ಕುಳಿತ್ತಿದ್ದ ಸವಾರ ಬಸವೆಣ್ಣೆಪ್ಪ (50) ಎಂದು ಗುರುತಿಸಲಾಗಿದೆ.

ಕಾರು ಶಿರಹಟ್ಟಿಯಿಂದ ಬೆಳ್ಳಟ್ಟಿ ಗ್ರಾಮದ ಕಡೆಗೆ ಹೋಗುತ್ತಿತ್ತು. ಈ ವೇಳೆ ದೇವಿಹಾಳ ಗ್ರಾಮದ ಬಳಿ ಬರುತ್ತಿದ್ದಂತೆ ಕಾರು-ಬೈಕ್​ ನಡುವೆ ಅಪಘಾತವಾಗಿದ್ದು ಘಟನೆಯಲ್ಲಿ ಬೈಕ್​ ಸವಾರ ಸಾವನ್ನಪ್ಪಿದ್ದಾನೆ. ಮತ್ತೋರ್ವ ಗಂಭೀರ ಗಾಯಗೊಂಡಿದ್ದಾರೆ. ಇವರನ್ನು ಹುಬ್ಬಳ್ಳಿಯ ಕಿಮ್ಸ್​ಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆಕ್ಸಿಡೆಂಟ್ ಆಗುತ್ತಿದ್ದಂತೆ ಕಾರಿನ ಚಾಲಕಿ ಪರಾರಿ ಆಗಿದ್ದಾಳೆ. ಶಿರಹಟ್ಟಿ‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement -

Related news

error: Content is protected !!