- Advertisement -
- Advertisement -
ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಶಿರಹಟ್ಟಿ ತಾಲೂಕಿನ ದೇವಿಹಾಳ ಗ್ರಾಮದ ಬಳಿ ನಡೆದಿದೆ.
ಮೃತಪಟ್ಟ ವ್ಯಕ್ತಿ ದೇವಿಹಾಳ ಗ್ರಾಮ ಪಂಚಾಯತಿ ಸದಸ್ಯ ಯಲ್ಲಪ್ಪ (48) ಗಂಭೀರ ಗಾಯಗೊಂಡ ಬೈಕ್ ಹಿಂಬದಿ ಕುಳಿತ್ತಿದ್ದ ಸವಾರ ಬಸವೆಣ್ಣೆಪ್ಪ (50) ಎಂದು ಗುರುತಿಸಲಾಗಿದೆ.
ಕಾರು ಶಿರಹಟ್ಟಿಯಿಂದ ಬೆಳ್ಳಟ್ಟಿ ಗ್ರಾಮದ ಕಡೆಗೆ ಹೋಗುತ್ತಿತ್ತು. ಈ ವೇಳೆ ದೇವಿಹಾಳ ಗ್ರಾಮದ ಬಳಿ ಬರುತ್ತಿದ್ದಂತೆ ಕಾರು-ಬೈಕ್ ನಡುವೆ ಅಪಘಾತವಾಗಿದ್ದು ಘಟನೆಯಲ್ಲಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಮತ್ತೋರ್ವ ಗಂಭೀರ ಗಾಯಗೊಂಡಿದ್ದಾರೆ. ಇವರನ್ನು ಹುಬ್ಬಳ್ಳಿಯ ಕಿಮ್ಸ್ಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆಕ್ಸಿಡೆಂಟ್ ಆಗುತ್ತಿದ್ದಂತೆ ಕಾರಿನ ಚಾಲಕಿ ಪರಾರಿ ಆಗಿದ್ದಾಳೆ. ಶಿರಹಟ್ಟಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
- Advertisement -