Sunday, May 5, 2024
spot_imgspot_img
spot_imgspot_img

ಕಾರು- ಟ್ಯಾಂಕರ್ ನಡುವೆ ಅಪಘಾತ; ಮೂವರು ಮೃತ್ಯು, ಇಬ್ಬರು ಗಂಭೀರ..!

- Advertisement -G L Acharya panikkar
- Advertisement -

ಕಾರು- ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗದ ಮದಕರಿಪುರ ಬ್ರೀಡ್ಜ್ ಬಳಿ ನಡೆದಿದೆ.

ಮೃತಪಟ್ಟವರನ್ನು ಬೆಂಗಳೂರು ಮೂಲದ ನಿರ್ಮಲ (55), ವಿನುತ (40), ಯಶಸ್(2) ಎಂದು ಗುರುತಿಸಲಾಗಿದೆ.

ಚಿತ್ರದುರ್ಗದ ಮದಕರಿಪುರ ಹೊಸ ಹೈವೆ ಬ್ರೀಡ್ಜ್ ಬಳಿ ಅಪಘಾತ ನಡೆದಿದೆ. ಬೆಂಗಳೂರು ಕಡೆಯಿಂದ ಹೊಸಪೇಟೆ ಕಡೆ ಹೋಗುವ ವೇಳೆ ಅಪಘಾತ ನಡೆದಿದ್ದು, ಅಪಘಾತದದಲ್ಲಿ ಫಣಿರಾಜು(37), ರಶ್ಮಿ (27) ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರೆದಿದೆ. ಘಟನಾ ಸ್ಥಳಕ್ಕೆ ಸಿಪಿಐ ಮುದ್ದುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗದ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟ‌ನೆ ನಡೆದಿದೆ.

- Advertisement -

Related news

error: Content is protected !!