Sunday, April 28, 2024
spot_imgspot_img
spot_imgspot_img

ಲಾರಿ-ಅಂಬುಲೆನ್ಸ್‌ ನಡುವೆ ಅಪಘಾತ; ಚಾಲಕನಿಗೆ ಗಾಯ..!

- Advertisement -G L Acharya panikkar
- Advertisement -

ಲಾರಿ ಹಾಗೂ ಅಂಬುಲೆನ್ಸ್‌ ನಡುವೆ ಅಪಘಾತ ಸಂಭವಿಸಿ ಅಂಬುಲೆನ್ಸ್‌ ಚಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಡಿಕೇರಿ ವಿರಾಜಪೇಟೆ ಗೋಣಿಕೊಪ್ಪ ಮುಖ್ಯ ರಸ್ತೆಯ ಕೊಳತ್ತೋಡು ಎಂಬಲ್ಲಿ ನಡೆದಿದೆ.

ಗಾಯಗೊಂಡ ಅಂಬುಲೆನ್ಸ್‌ ಚಾಲಕನನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಶನಿವಾರ ಬೆಳಗ್ಗೆ ಸಂಭವಿಸಿದ ಅಪಘಾತದ ಗಾಯಾಳುವನ್ನು ಮೈಸೂರಿಗೆ ಕರೆದೊಯ್ಯುತ್ತಿದ್ದ ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯ ಅಂಬುಲೆನ್ಸ್‌ ಅಪಘಾತಕ್ಕೊಳಗಾಗಿದೆ. ಎದುರಿನಿಂದ ಬಂದ ಲಾರಿಗೆ ಅಂಬುಲೆನ್ಸ್‌ ಡಿಕ್ಕಿ ಹೊಡೆದಿದೆ. ಲಾರಿ ಚಾಲಕ ಅಪಘಾತದ ವೇಳೆ ತಕ್ಷಣ ಪಕ್ಕದ ಮರಕ್ಕೆ ಲಾರಿಯನ್ನು ಡಿಕ್ಕಿ ಹೊಡೆಸಿದ್ದಾನೆ. ಸದ್ಯ ಲಾರಿ ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ.

ಸದ್ಯ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಗಾಯಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಾಲಕನನ್ನು ಹೊರತುಪಡಿಸಿ ಉಳಿದವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಬಂಧ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!