Friday, May 17, 2024
spot_imgspot_img
spot_imgspot_img

ಲಾರಿ-ಟಿಟಿ ವಾಹನ ನಡುವೆ ಅಪಘಾತ; ಮೂವರು ಮೃತ್ಯು..!

- Advertisement -G L Acharya panikkar
- Advertisement -

ಲಾರಿ ಮತ್ತು ಟಿಟಿ ವಾಹನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ರಾಮನಗರ ಚನ್ನಪಟ್ಟಣ ತಾಲ್ಲೂಕಿನ ಬೈರಾಪಟ್ಟಣದ ಚಾಮುಂಡೇಶ್ವರಿ ವೈದ್ಯಕೀಯ ಕಾಲೇಜು ಬಳಿ ನಡೆದಿದೆ.

ಮೃತಪಟ್ಟವರನ್ನು ಸೋಮಲಿಂಗಪ್ಪ (70), ಶಿವಲಿಂಗಪ್ಪ (66), ರಾಜೇಶ್ವರಿ ಎಂದು ಗುರುತಿಸಲಾಗಿದೆ.

ಮದುವೆ ಮುಗಿಸಿಕೊಂಡು ಕುಟುಂಬ ಸಮೇತ ವಾಪಸ್ ಹೋಗುವಾಗ ಅಪಘಾತ ನಡೆದು ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು ಟಿಟಿ ವಾಹನದಲ್ಲಿದ್ದ ಉಳಿದ ಆರು ಮಂದಿಗೆ ಗಾಯವಾಗಿದೆ. ಅದರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಮೈಸೂರಿನಿಂದ ಬೆಂಗಳೂರಿಗೆ ತೆರಳುವಾಗ ಈ ಘಟನೆ ನಡೆದಿದೆ. ಮೃತ ದೇಹಗಳು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಚನ್ನಪಟ್ಟಣ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚನ್ನಪಟ್ಟಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!