- Advertisement -
- Advertisement -
ಅತಿ ವೇಗವಾಗಿ ಬಂದ ಕಾರೊಂದು ಡಿವೈಡರ್ ಮೇಲಿನಿಂದ ಪಕ್ಕದ ರಸ್ತೆಯ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 6 ಜನ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಜಯಪುರ ಗೇಟ್ ಬಳಿಯ ದಶಪತ ಹೆದ್ದಾರಿಯಲ್ಲಿ ನಡೆದಿದೆ.
ಮೈಸೂರಿನಿಂದ ಬೆಂಗಳೂರು ಕಡೆಗೆ ಟಾಟಾ ಪಂಚ್ ಕಾರನ್ನು ಮಹಿಳೆ ವೇಗವಾಗಿ ಚಲಾಯಿಸಿಕೊಂಡು ಹೋಗುತ್ತಿದ್ದರು. ಈ ವೇಳೆ ನಿದ್ದೆ ಮಂಪರಿಗೆ ಜಾರಿದ್ದರಿಂದ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಯಲ್ಲಿ ಚಲಿಸುತ್ತಿದ್ದ ಥಾರ್ ಕಾರಿಗೆ ಭಯಾನಕವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮ ಟಾಟಾ ಪಂಚ್ ಕಾರಿನ ಡ್ರೈವರ್ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಎರಡು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಕ್ಕಳು ಸೇರಿ ಒಟ್ಟು 6 ಮಂದಿಗೆ ಗಾಯಗಳು ಆಗಿವೆ. ಇನ್ನು ಸ್ಥಳೀಯರು ತಕ್ಷಣ ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಘಟನಾ ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಮನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -